ರಾಜ್ಯ ಬಿಜೆಪಿ- ಮೈಸೂರು ಭಾಗದ ನಾಲ್ವರಿಗೆ ಸ್ಥಾನ
ಮೈಸೂರು : ಬಿ.ವೈ. ವಿಜಯೇಂದ್ರ ಅವರು ಅಧ್ಯಕ್ಷರಾದ ನಂತರ ರಾಜ್ಯ ಬಿಜೆಪಿ ಘಟಕವನ್ನು ಪುನರ್ ರಚಿಸಲಾಗಿದೆ, ಮೈಸೂರು ಭಾಗದ ನಾಲ್ವರಿಗೆ ಸ್ಥಾನ ಸಿಕ್ಕಿದೆ.
ಹೋಟೆಲ್ ಉದ್ಯಮಿ ಎಂ. ರಾಜೇಂದ್ರ ಅವರನ್ನು ಉಪಾಧ್ಯಕ್ಷರಾಗಿ ಮುಂದುವರಿಸಲಾಗಿದೆ. ಮಾಜಿ ಸಚಿವ ಎನ್. ಮಹೇಶ್ ಅವರನ್ನು ರಾಜ್ಯ ಉಪಾಧ್ಯಕ್ಷರಾಗಿ ನೇಮಿಸಲಾಗಿದೆ.
ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಮೈಲ್ಯಾಕ್ ಮಾಜಿ ಅಧ್ಯಕ್ಷರಾದ ಆರ್. ರಘು ಅವರನ್ನು ರಾಜ್ಯ ಹಿಂದುಳಿದ ವರ್ಗಳ ಮೋರ್ಚಾ ಅಧ್ಯಕ್ಷರಾಗಿ ನೇಮಿಸಲಾಗಿದೆ. ದಂತ ವೈದ್ಯ ಡಾ.ಅನಿಲ್ ಥಾಮಸ್ ಅವರನ್ನು ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾಗಿ ನೇಮಿಸಲಾಗಿದೆ.