ಬೀದರ್: Cyber fraud: ಎಚ್ಚರ! ಫೋನ್ ಪೇ ವೇರಿಫೈ ಹೆಸರಲ್ಲಿ ಬರೋಬ್ಬರಿ ₹40 ಲಕ್ಷ ವಂಚನೆ; OTP ಇಲ್ಲ ಎಂದ್ರು ಖಾತೆಯಲ್ಲಿದ್ದ ಹಣ ಮಾಯ

ಬೀದರ್: ಫೋನ್ ಪೇ (Phonepe) ವೇರಿಫೈ ಹೆಸರಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ 79 ಜನರಿಂದ 40 ಲಕ್ಷ ರೂಪಾಯಿ ವಂಚಿಸಿದ ಆರೋಪಿಯನ್ನು ಬೀದ‌ರ್ (Bidar) ಜಿಲ್ಲಾ ಪೊಲೀಸರು (Police) ಬಂಧಿಸಿದ್ದಾರೆ. ಆತನ ಬಳಿಯಿಂದ ಆರು ಮೊಬೈಲ್‌ಗಳು, 45 ಸಿಮ್ ಕಾರ್ಡ್‌ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಬೀದರ್ ನ ಕೆಎಚ್‌ಬಿ ಕಾಲನಿ (KHB Colony) ನಿವಾಸಿ ಶಿವಪ್ರಸಾದ ಮಾಡಗಿ ಬಂಧಿತ ಆರೋಪಿಯಾಗಿದ್ದಾನೆ. ಜನರಿಂದ ವಂಚಿಸಿದ 40 ರೂಪಾಯಿ ಲಕ್ಷವನ್ನು ಐಷಾರಾಮಿ ಜೀವನ (Luxurious life) ನಡೆಸಲು ಖರ್ಚು ಮಾಡಿದ್ದಾನೆ. ಪೊಲೀಸರು 12 ಸಾವಿರವಷ್ಟೇ ಆತನ ಬಳಿಯಿಂದ ಜಪ್ತಿ ಮಾಡಿದ್ದಾರೆ.

ಬಂಧಿತ ಆರೋಪಿ ವಿವಿಧ ಇಲಾಖೆಗಳ ಸರ್ಕಾರಿ ನೌಕರರ ದತ್ತಾಂಶಗಳನ್ನು ಗೂಗಲ್‌ನಲ್ಲಿ ಸರ್ಚ್ ಮಾಡುತ್ತಿದ್ದ. ಅವರ ಮೊಬೈಲ್ ಸಂಖ್ಯೆಗಳನ್ನು ಸಂಗ್ರಹಿಸಿ, ಅವರಿಗೆ ಕರೆ ಮಾಡಿ ವಂಚಿಸುತ್ತಿದ್ದ. ತಾನು ಎಸ್‌ಬಿಐ ಮುಖ್ಯ ಕಚೇರಿಯಿಂದ ಕರೆ ಮಾಡುತ್ತಿದ್ದೇನೆ ಎಂದು ಹೇಳಿ, ಫೋನ್ ಪೇನಲ್ಲಿ ಯುಪಿಐ ಐಡಿ ವೇರಿಫೈ ಮಾಡಿ, ಹಣದ ಲಿಮಿಟ್ ಸೆಟ್ ಮಾಡಲು ಹೇಳುತ್ತಿದ್ದ. ಅವರ ಮೂಲಕವೇ ತಾನು ಹೇಳಿದ ಯುಪಿಐ ಐಡಿ ದಾಖಲಿಸಿ, ಚಿನ್ನಾಭರಣ ಹಾಗೂ ಮೊಬೈಲ್ ಮಳಿಗೆಗಳ ಯುಪಿಐಗೆ ಹಣ ವರ್ಗಾಯಿಸಿ, ಸ್ಕ್ರೀನ್ ಶಾಟ್ ತರಿಸಿಕೊಳ್ಳುತ್ತಿದ್ದ.

ಬಳಿಕ ಅದನ್ನು ಮಳಿಗೆಯವರಿಗೆ ತೋರಿಸಿ ಚಿನ್ನದ ನಾಣ್ಯ ಹಾಗೂ ಮೊಬೈಲ್‌ಗಳನ್ನು ಖರೀದಿಸಿ, ಒಎಲ್‌ಎಕ್ಸ್‌ನಲ್ಲಿ ಮಾರಾಟ ಮಾಡಿ ಐಷಾರಾಮಿ ಜೀವನ ನಡೆಸುತ್ತಿದ್ದ. ಆರೋಪಿ ಬೀದರ್ ನ ಕರ್ನಾಟಕ ಕಾಲೇಜಿನಲ್ಲಿ ಬಿಸಿಎ ಪದವಿ ಪೂರೈಸಿದ್ದು, ಹಿಂದೆ ಬೆಂಗಳೂರಿನಲ್ಲಿ ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ. ಅಲ್ಲಿ ಕೂಡ ₹4.50 ಲಕ್ಷ ಮೌಲ್ಯದ 150 ಮೊಬೈಲ್‌ಗಳನ್ನು ವಂಚಿಸಿ ಬಂಧನಕ್ಕೊಳಗಾಗಿದ್ದ. ಆನಂತರ ಬೆಂಗಳೂರಿನಲ್ಲಿ ಡಾನ್ಸ್ ಬಾರ್‌ಗಳಿಗೆ ಯುವತಿಯರನ್ನು ಕರೆದೊಯ್ಯುವ ಕೆಲಸ ಮಾಡುತ್ತಿದ್ದ. ಡಾನ್ಸ್ ಬಾರ್‌ಗಳು ಬಂದ್ ಆದ ನಂತರ ಆನ್‌ಲೈನ್‌ನಲ್ಲಿ ಜನರನ್ನು ವಂಚಿಸಲು ಆರಂಭಿಸಿದ್ದ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ತಿಳಿಸಿದ್ದಾರೆ

ರಿಯಲ್‌ ಎಸ್ಟೇಟ್ ಜಿದ್ದಿಗಾಗಿ ಶೂಟೌಟ್

ಹಾಸನದ ಹೊಯ್ಸಳನಗರದಲ್ಲಿ ನಡೆದಿದ್ದ ಗುಂಡಿನ ದಾಳಿ ಪ್ರಕರಣದ ತನಿಖೆ ಚುರುಕುಗೊಂಡಿದೆ. ಘಟನಾ ಸ್ಥಳಕ್ಕೆ ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ ಭೇಟಿ ನೀಡಿ ಪ್ರಕರಣದ ಮಾಹಿತಿ ಸಂಗ್ರಹಿಸಿದ್ದಾರೆ. ಈ ವೇಳೆ ಮಾತನಾಡಿದ ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ ಘಟನೆ ನಡೆಯೋ ಕೆಲ ಸಮಯದ ಮುನ್ನ ಇಬ್ಬರ ನಡುವೆ ವಾಗ್ವಾದ ನಡೆದಿರುವ ಬಗ್ಗೆ ಮಾಹಿತಿ ಇದೆ.

ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಲಾಗುತ್ತಿದೆ. ಮೇಲ್ನೋಟಕ್ಕೆ ಇದೊಂದು ಗುಂಡಿನ ದಾಳಿ ಅನಿಸ್ತಿದೆ. ಪಿಸ್ತೂಲ್ ಕೂಡ ಕಾರಿನ ಒಳಗೆ ಇದೆ. ಶರಾಫತ್ ಅಲಿ ಬಿಹಾರದವರಾಗಿದ್ದು, ಚಿಕ್ಕವರಿದ್ದಾಗಲೇ ಇಲ್ಲಿದ್ದಾರೆ. ಆಸಿಫ್ ಬೆಂಗಳೂರಿನವರು, ಹಾಸನದ ಮಹಿಳೆಯನ್ನ ಮದುವೆಯಾಗಿದ್ದಾರೆ. ಹೆಚ್ಚಿ ಮಾಹಿತಿ ತನಿಖೆ ಬಳಿಕ ಸಿಗುತ್ತೆ ಎಂದಿದ್ದಾರೆ. ಸ್ಥಳಕ್ಕೆ ಹಾಸನ ಎಸ್‌ಪಿ ಮೊಹ್ಮದ್ ಸುಜೇತಾ, ದಕ್ಷಿಣ ವಲಯ ಐಜಿಪಿ ಡಾ. ಬೋರಲಿಂಗಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *