ಮಲ್ಲಿಕಾರ್ಜುನ ಖರ್ಗೆ ಅವರು AICC ಅಧ್ಯಕ್ಷರು; ಯಾರೇ ಆದರೂ ಪಕ್ಷದ ಶಿಸ್ತು ಉಲ್ಲಂಘಿಸಿದರೆ ಪ್ರಶ್ನೆ ಮಾಡುವ ಬೈಯುವ ಹಕ್ಕು ಅವರಿಗಿದೆ: ಪ್ರಿಯಾಂಕ್ ಖರ್ಗೆ
ಮಲ್ಲಿಕಾರ್ಜುನ ಖರ್ಗೆಯವರು ಕರ್ನಾಟಕ ರಾಜಕಾರಣದಲ್ಲಿ ಅತ್ಯಂತ ಹಿರಿಯರು. ಅವರಿಗೆ ದಶಕಗಳ ರಾಜಕೀಯ ಅನುಭವ ಇದೆ. ವಯಸ್ಸೂ ಇದೆ. ಪಕ್ಷದಲ್ಲಿ ಯಾರನ್ನೇ ಆದರೂ ಶಿಸ್ತಿನ ಹಾದಿಯಲ್ಲಿ ನಡೆಸುವ ಸಂಪೂರ್ಣ ಅಧಿಕಾರ ಮತ್ತು ಅರ್ಹತೆ ಅವರಿಗಿದೆ. ಅದನ್ನು ಪ್ರಶ್ನಿಸುವ ಯೋಗ್ಯತೆ ಬಿಜೆಪಿಯವರಿಗೆ ಇಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿಯವರಿಗೆ ತಮ್ಮ ಪಕ್ಷದ ಬಗ್ಗೆ ಇರುವ ಚಿಂತೆಗಿಂತ ಮಲ್ಲಿಕಾರ್ಜುನ ಖರ್ಗೆ ಏನು ಹೇಳುತ್ತಾರೆ ಎಂಬುದರ ಬಗ್ಗೆ ಹೆಚ್ಚು ಚಿಂತೆಯಿದೆ. ತಮ್ಮ ಶಾಸಕರು ಬಿಜೆಪಿಗೆ ನಿಷ್ಠರಾಗಿದ್ದಾರೆ ಎಂಬುದಕ್ಕೆ ಪ್ರಮಾಣ ಮಾಡಿಸಲು ಪಕ್ಷದ ಅಧ್ಯಕ್ಷರು ಎಲ್ಲರನ್ನೂ ದೇವಸ್ಥಾನಕ್ಕೆ ಕರೆದೊಯ್ಯಬೇಕಾದ ಪರಿಸ್ಥಿತಿ ಬಂದಿದ್ದರೆ, ಅವರ ಆತ್ಮವಿಶ್ವಾಸದ ಮಟ್ಟವನ್ನು ಊಹಿಸಬಹುದು. ಆದರೆ ಒಂದು ಮಾತು ಹೇಳಬೇಕೆಂದರೆ, ರಾಮನ ಹೆಸರಿನಲ್ಲಿ ಲೂಟಿ ಮಾಡಿದವರು ಮಂಜುನಾಥ ಸ್ವಾಮಿಯ ಹೆಸರಿನಲ್ಲಿ ಸತ್ಯವನ್ನು ಹೇಳುತ್ತಾರೆಯೇ?” ಎಂದು ಪ್ರಶ್ನಿಸಿದರು.
