ಭೂಗತ ಪಾತಕಿ ಚೋಟಾ ರಾಜನ್ ಅಂಚೆ ಚೀಟಿ ಬಿಡುಗಡೆ; ಪೇಚಿಗೆ ಸಿಲುಕಿದ ಉತ್ತರಪ್ರದೇಶ ಸರ್ಕಾರ
ಉತ್ತರಪ್ರದೇಶದ ಕಾನ್ಪುರ ಅಂಚೆ ಇಲಾಖೆ ಹೀಗೆ ಭೂಗತ ಪಾತಕಿಗಳ ಅಂಚೆ ಚೀಟಿ ಬಿಡುಗಡೆ ಮಾಡುವ ಮೂಲಕ ಭಾರತದ ಸಾಧಕರಿಗೆ ಅಗೌರವ ತೋರಿದೆ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರಿದ್ದಾರೆ.

ಚೋಟಾ ರಾಜನ್.

ಚೋಟಾ ರಾಜನ್ ಮತ್ತು ಮುನ್ನಾ ಭಜರಂಗಿ ಸ್ಟಾಂಪ್.
ಅಂಚೆ ಇಲಾಖೆ ಸಾಮಾನ್ಯವಾಗಿ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವ್ಯಕ್ತಿಗಳ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡುವುದು ವಾಡಿಕೆ. ಆದರೆ, ಉತ್ತರಪ್ರದೇಶದ ಕಾನ್ಪುರ ಅಂಚೆ ಇಲಾಖೆ ಹೀಗೆ ಭೂಗತ ಪಾತಕಿಗಳ ಅಂಚೆ ಚೀಟಿ ಬಿಡುಗಡೆ ಮಾಡುವ ಮೂಲಕ ಭಾರತದ ಸಾಧಕರಿಗೆ ಅಗೌರವ ತೋರಿದೆ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರಿದ್ದಾರೆ.
ಆದರೆ, ನಡೆದ ತಪ್ಪುಗಳ ಬಗ್ಗೆ ಪೋಸ್ಟ್ ಮಾಸ್ಟರ್ ಜನರಲ್ ವಿ.ಕೆ.ವರ್ಮಾ ಒಪ್ಪಿಕೊಂಡಿದ್ದು, ಅದು ಗುಮಾಸ್ತರ ಕಡೆಯಿಂದ ಆದ ತಪ್ಪು ಎಂದು ಸ್ಪಷ್ಟನೆ ನೀಡಿದ್ದಾರೆ. “ಇದು ಹೇಗೆ ಸಂಭವಿಸಿತು ಮತ್ತು ಗುಮಾಸ್ತರಿಗೆ ಪಾತಕಿಗಳನ್ನು ಗುರುತಿಸಲು ಯಾಕೆ ಸಾಧ್ಯವಾಗಲಿಲ್ಲ ಎಂದು ನಾವು ತನಿಖೆ ನಡೆಸುತ್ತಿದ್ದೇವೆ. ತಪ್ಪಿತಸ್ಥರ ವಿರುದ್ದ ಕ್ರಮಕೈಗೊಳ್ಳುತ್ತೇವೆ” ಎಂದು ಅವರು ಹೇಳಿದ್ದಾಗಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದೆ.
‘ಮೈ ಸ್ಟಾಂಪ್’ ಯೋಜನೆಯಡಿ ಆಸಕ್ತರು ನಿಗದಿತ ಶುಲ್ಕ ಪಾವತಿಸಿ ತಮ್ಮ ವ್ಯಕ್ತಿ ಚಿತ್ರವುಳ್ಳ ಅಂಚೆ ಚೀಟಿಯ ಹಾಳೆಗಳನ್ನು ಪಡೆಯಬಹುದು. ಈ ಸ್ಟಾಂಪ್ಗಳನ್ನು ಪತ್ರ, ಲಕೋಟೆ ಕಳುಹಿಸಲು ಬಳಸಬಹುದು. ಇದಕ್ಕಾಗಿ ಅರ್ಜಿದಾರರರು ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ಗುರುತು ಖಾತರಿಪಡಿಸುವ ದಾಖಲೆಯನ್ನು ಅಂಚೆ ಅಧಿಕಾರಿಗಳಿಗೆ ನೀಡಬೇಕಾಗುತ್ತದೆ.