Gold Price: ಬಜೆಟ್ ಘೋಷಣೆ ಬಳಿಕ ಚಿನ್ನದ ಬೆಲೆಯಲ್ಲಿ ಇಳಿಕೆ; ಬೆಳ್ಳಿ ದರ ಮತ್ತೆ ಏರಿಕೆ

Gold Rate Today | ಭಾರತದಲ್ಲಿ ಕಳೆದೊಂದು ವಾರದಿಂದ ಒಂದೇ ರೀತಿಯಿದ್ದ ಚಿನ್ನದ ಬೆಲೆ ನಿನ್ನೆ ಬಜೆಟ್ ಮಂಡನೆ ಬಳಿಕ ಕುಸಿತ ಕಂಡಿದೆ. ಆದರೆ, ಬೆಳ್ಳಿ ದರ ಮಾತ್ರ ಗಗನಕ್ಕೇರುತ್ತಲೇ ಇದೆ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ಇಂದು ಯಾವ ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಿನ್ನೆ ಬಜೆಟ್​ನಲ್ಲಿ ಚಿನ್ನ, ಬೆಳ್ಳಿಯ ಮೇಲಿನ ಆಮದು ಸುಂಕವನ್ನು ಕಡಿಮೆಗೊಳಿಸುವುದಾಗಿ ಘೋಷಣೆ ಮಾಡಿದ ನಂತರ ಚಿನ್ನದ ಬೆಲೆ ಇಳಿಕೆಯಾಗಿದೆ.

ಬಜೆಟ್ ಘೋಷಣೆಗೂ ಮುನ್ನ ಬೆಂಗಳೂರಿನಲ್ಲಿ 24 ಗ್ರಾಂ ಚಿನ್ನದ ಬೆಲೆ 49,970 ರೂ. ಇತ್ತು. ಆದರೆ, ಇಂದು 49,630 ರೂ. ಆಗಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 45,480 ರೂ. ಆಗಿದೆ. ಬೆಳ್ಳಿ ದರದಲ್ಲೂ ದಾಖಲೆಯ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಬೆಳ್ಳಿ ಬೆಲೆ 70 ಸಾವಿರ ರೂ. ದಾಟಿದೆ.

ಸೋಮವಾರ ಬಜೆಟ್ ಘೋಷಣೆಯ ಬಳಿಕ ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಕುಸಿತವಾಗಿದ್ದು, 10 ಗ್ರಾಂ ಚಿನ್ನಕ್ಕೆ 1,324 ರೂ. ಕುಸಿತವಾಗುವ ಮೂಲಕ 47,520 ರೂ. ಆಗಿತ್ತು. ಅದೇ ರೀತಿ ಭಾರತದಲ್ಲಿ 1 ಕೆಜಿ ಬೆಳ್ಳಿ ಬೆಲೆ ನಿನ್ನೆ ಸುಮಾರು ಎರಡೂವರೆ ಸಾವಿರದಷ್ಟು ಏರಿಕೆಯಾಗಿದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ.

ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಇಂದು 49,630 ರೂ. ಆಗಿದೆ. ಹಾಗೇ, 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 45,480 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ ಕಡಿಮೆಯಾಗಿದೆ. ಆದರೆ, ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಈ ನಗರಗಳಲ್ಲಿ ಚಿನ್ನದ ಬೆಲೆ 52,000 ರೂ. ದಾಟಿದೆ.

ಭಾರತದಲ್ಲಿ ಬೆಳ್ಳಿ ಬೆಲೆಯಲ್ಲಿ ಇಂದು ದಾಖಲೆಯ ಏರಿಕೆಯಾಗಿದೆ. 2 ದಿನಗಳ ಹಿಂದೆ 69,800 ರೂ. ಇದ್ದ 1 ಕೆಜಿ ಬೆಳ್ಳಿ ದರ ಇಂದು 74,000 ರೂ. ಆಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆಯಲ್ಲಿಯೂ ಭಾರೀ ಏರಿಕೆಯಾಗಿದ್ದು, ಇಂದು 74,000 ರೂ. ಆಗಿದೆ. ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 76,800 ರೂ. ದಾಟಿದೆ.ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು

ಕೊರೋನಾ ವೈರಸ್​ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್​ ಎಸ್ಟೇಟ್​ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್​ಡೌನ್​ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *