ವಿಜಯಪುರ ; ಬಸ್ ನಿಲ್ದಾಣದಲ್ಲಿ ಮಲಗಿದ್ದ ಬಿಕ್ಷುಕನ ಕೊಲಗೈದ ದುಷ್ಕರ್ಮಿಗಳು..!

ವಿಜಯಪುರ: ಬಸ್ ನಿಲ್ದಾಣದಲ್ಲಿ ಮಲಗಿದ್ದ ಭಿಕ್ಷುಕನ್ನು ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿರುವ ಘಟನೆ ವಿಜಯಪುರದ ವಿಶ್ವೇಶ್ವರ ಕಾಲನಿ ಸಿಟಿ‌ಬಸ್ ನಿಲ್ದಾಣದಲ್ಲಿ ನಡೆದಿದೆ.

ಕಳೆದ ಮೂರ್ನಾಲ್ಕು ತಿಂಗಳಿಂದ ಬಸ್ ನಿಲ್ದಾಣದಲ್ಲೆ ವಾಸಿಸುತ್ತಿದ್ದ ಭಿಕ್ಷುಕ , ನಿನ್ನೆ ತಡರಾತ್ರಿ ಘಟನೆ ನಡೆದಿರಬಹುದು ಎನ್ನಲಾಗುತ್ತಿದೆ.

ಘಟನಾ ಸ್ಥಳಕ್ಕೆ  ಆದರ್ಶನಗರ ಪಿಎಸ್ಐ ಶರಣಬಸಪ್ಪ ಅಜೂರ ಮತ್ತು ಶ್ವಾನ ದಳ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

‌ಈ ಕುರಿತು ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *