ರಾಜ್ಯಸಭೆ ವಿರೋಧ ಪಕ್ಷದ ನಾಯಕರಾಗಿ ಮಲ್ಲಿಕಾರ್ಜುನ ಖರ್ಗೆ ನೇಮಕ

ನವದೆಹಲಿ, ಫೆ. 12: ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿ ಅನುಭವಿ ರಾಜಕಾರಣಿ, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆಮಾಡಲಾಗಿದೆ.
ಕಾಂಗ್ರೆಸ್‌ನ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಖರ್ಗೆ ಅವರನ್ನು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಆಯ್ಕೆ ಮಾಡಿ, ಕಾಂಗ್ರೆಸ್ ಹೈಕಮಾಂಡ್ ರಾಜ್ಯಸಭೆಯ ಸಭಾಪತಿಗೆ ಪತ್ರ ಬರೆದಿದೆ. ಗುಲಾಂ ನಬಿ ಆಜಾದ್ ಸೇರಿದಂತೆ ನಾಲ್ವರು ರಾಜ್ಯಸಭಾ ಸದಸ್ಯರು ನಿವೃತ್ತರಾಗುತ್ತಿದ್ದಾರೆ.
ಇತ್ತೀಚೆಗೆ ರಾಜ್ಯಸಭೆಯಲ್ಲಿ ನಿವೃತ್ತರಾಗುತ್ತಿರುವ ಸದಸ್ಯರನ್ನು ಉದ್ದೇಶಿಸಿ ವಿದಾಯ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಗುಲಾಂ ನಬಿ ಆಜಾದ್ ಬಗ್ಗೆ ಪ್ರಸ್ತಾಪಿಸುವಾಗ ಭಾವುಕರಾದರು. ಆಜಾದ್ ಅವರ ಕೊಡುಗೆಯನ್ನು ಶ್ಲಾಘಿಸಿದ್ದರು.
ಸದಸ್ಯತ್ವದಿಂದ ನಿವೃತ್ತಿಯಾಗುತ್ತಿರುವ ಸಂದರ್ಭದಲ್ಲಿ ರಾಜ್ಯಸಭೆಯಲ್ಲಿ ವಿದಾಯ ಭಾಷಣ ಮಾಡಿದ ಗುಲಾಂ ನಬಿ ಆಜಾದ್, ‘ಪಾಕಿಸ್ತಾನಕ್ಕೆ ತೆರಳದ ಅದೃಷ್ಟವಂತರಲ್ಲಿ ನಾನೂ ಒಬ್ಬ. ಪಾಕಿಸ್ತಾನದಲ್ಲಿನ ಪರಿಸ್ಥಿತಿಗಳ ಬಗ್ಗೆ ಓದಿದಾಗ, ನಾನೊಬ್ಬ ಹಿಂದುಸ್ತಾನಿ ಮುಸ್ಲಿಮನಾಗಿರುವುದಕ್ಕೆ ಹೆಮ್ಮೆಯಿದೆ’ ಎಂದು ಹೇಳಿದ್ದರು.
‘ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ನನಗೆ ಜನರ ಪ್ರೀತಿ ದೊರೆತಿದೆ’ ಎಂದು ತಿಳಿಸಿದ್ದರು.
ಈ ಮುಂಚೆ ಕಳೆದ ಲೋಕಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ನ ವಿರೋಧ ಪಕ್ಷದ ನಾಯಕರಾಗಿದ್ದರು, ಅವರು ನಂತರ ಚುನಾವಣೆಯಲ್ಲಿ ಪರಾಭವಗೊಂಡ ಹಿನ್ನೆಲೆಯಲ್ಲಿ ಪಕ್ಷ ಅವರನ್ನು ಮತ್ತೇ ರಾಜ್ಯಸಭೆಗೆ ನಾಮಕರಣ ಮಾಡಿತ್ತು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *