ರಮೇಶ್‌ ಸಿಡಿ ವಿಚಾರದ ಬಗ್ಗೆ ಹೈಕಮಾಂಡ್‌ ನಿರ್ಧಾರ ಕೈಗೊಳ್ಳುತ್ತದೆ: ಬಸವರಾಜ್ ಬೊಮ್ಮಾಯಿ

ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಸಿ.ಡಿ ವಿಚಾರಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ವಿಚಾರವಾಗಿ ನಾನು ಸಿಎಂ ಭೇಟಿಯಾಗಿಲ್ಲ. ಈಗಾಗಲೇ ಒಂದು ದೂರು ಕಬ್ಬನ್ ಪಾರ್ಕ್ ಸ್ಟೇಷನ್‌ನಲ್ಲಿ ದಾಖಲಾಗಿದೆ. ಈ ಬಗ್ಗೆ ವಿಸ್ತೃತ ತನಿಖೆ ಮಾಡಲಿದ್ದೇವೆ ಎಂದು ತಿಳಿಸಿದರು.

ಪಕ್ಷದ ನಿಲುವಾಗ್ಲಿ, ಹಿರಿಯರ ನಿಲುವು ಅವರೇ ಪ್ರಕಟ ಮಾಡ್ತಾರೆ. ಅದರ ಬಗ್ಗೆ ಮಾತನಾಡುವ ಅಧಿಕಾರ ನನಗಿಲ್ಲ. ಇದೆಲ್ಲವೂ ನಮ್ಮ ಗಮನದಲ್ಲಿದೆ ಎಂದರು. ಪಕ್ಷ ಮತ್ತು ಹಿರಿಯರು ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ. ತನಿಖೆಗೆ ಸಂಬಂಧ ಇಲ್ಲ, ನಿಪ್ಪಕ್ಷಪಾತವಾಗಿ ತನಿಖೆ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

ಮಂಗಳವಾರ ಸಚಿವ ರಮೇಶ್‌ ಜಾರಕಿಹೊಳಿಯ ಅಶ್ಲೀಲ ವಿಡಿಯೋ ವೈರಲ್‌ ಆಗಿದೆ. ಮಾಧ್ಯಮಗಳು ಸೇರಿ ಸಾಮಾನ್ಯ ಜನರ ಕೈಗೂ ವಿಡಿಯೋ ಸಿಕ್ಕಿದೆ. ಹೀಗಾಗಿ ಇದೀಗ ಇದು ರಾಜಕೀಯ ತಿರುವು ಪಡೆದುಕೊಂಡಿದ್ದು ಕಾಂಗ್ರೆಸ್‌, ರಮೇಶ್‌ ಅವರ ರಾಜೀನಾಮೆಗೆ ಪಟ್ಟು ಹಿಡಿದಿದೆ. ಇನ್ನು ಈ ಬಗ್ಗೆ ಸ್ಪಷ್ಟನೆ ನೀಡಿರುವ ರಮೇಶ್‌, ಇದು ರಾಜಕೀಯ ಪಿತೂರಿ ಎಂದಿದ್ದಾರೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *