ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸಿಡಿ ವಿಚಾರದ ಆರೋಪ ಕುರಿತಂತೆ ರಾಜಕೀಯ ಮಾಡುವುದಿಲ್ಲ – ಎಚ್.ಡಿ.ಕುಮಾರಸ್ವಾಮಿ

ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸಿಡಿ ವಿಚಾರದ ಆರೋಪ ಕುರಿತಂತೆ ರಾಜಕೀಯ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರದೊಂದಿಗೆ ಮಾತನಾಡಿದ ಹೆಚ್​ಡಿಕೆ ರಾಜಕೀಯ ಮಾಡಲು ಬೇರೆ ಮಾರ್ಗಗಳು ಇವೆ. ಸಿಡಿ ಆರೋಪದ ವಿಚಾರದ ಬಗ್ಗೆ ಚರ್ಚೆ ಮಾಡುವುದು ಶೋಭೆ ತರುವುದಿಲ್ಲ.

ರಾಜಕೀಯ ವ್ಯಕ್ತಿಗಳ ಈ ರೀತಿಯ ನಡವಳಿಕೆಗಳಿಂದ ಸಮಾಜದಲ್ಲಿ ಯಾವ ರೀತಿ ಸಂದೇಶ ಹೋಗುತ್ತದೆ ? ಈಗಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ನಾಯಕರಿಂದಲೇ ಪ್ರತಿಕ್ರಿಯೆ ಪಡೆಯಬೇಕು ಎಂದು ಹೇಳಿದರು.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ರಾಕ್ಷಸಿ ಸರ್ಕಾರವೆಂದು ಉಲ್ಲೇಖಿಸಿ ಆ ಸರ್ಕಾರವನ್ನು ತೆಗೆದು ರಾಮರಾಜ್ಯ ತಂದಿದ್ದೇವೆ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಹೇಳಿದ್ದರು. ಯಾವ ರಾಮರಾಜ್ಯ ತಂದಿದ್ದಾರೆ ಎಂಬುದನ್ನು ಎಲ್ಲರು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಟಾಂಗ್ ಕೊಟ್ಟು, ಸಿಡಿ ವಿಚಾರದ ಬಗ್ಗೆ ತಾವು ಹೆಚ್ಚು ಚರ್ಚಿಸುವುದಿಲ್ಲ ಎಂದು ಕುಮಾರಸ್ವಾಮಿ ಮಾಧ್ಯಮಗಳಿಗೆ ತಿಳಿಸಿದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *