ಏಕತಾ ಪ್ರತಿಮೆಗೆ ರಾಜನಾಥ್ ಸಿಂಗ್ ಭೇಟಿ: ಮೂರೂ ರಕ್ಷಣಾ ಪಡೆಗಳ ಮುಖ್ಯಸ್ಥರ ಸಾಥ್!

ಹೈಲೈಟ್ಸ್‌:

  • ಗುಜರಾತ್‌ನ ಕೇವಾಡಿಯಾದಲ್ಲಿ ಮೂರೂ ರಕ್ಷಣಾ ಪಡೆಗಳ ಕಮಾಂಡರ್‌ಗಳ ಮಟ್ಟದ ಸಭೆ.
  • ಕೇವಾಡಿಯಾದಲ್ಲಿರುವ ಏಕತಾ ಪ್ರತಿಮೆಗೆ ಭೇಟಿ ನೀಡಿದ ರಕ್ಷಣಾ ಸಚಿವ ರಾಜಮಾಥ್ ಸಿಂಗ್.
  • ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮೂರೂ ರಕ್ಷಣಾ ಪಡೆಗಳ ಮುಖ್ಯಸ್ಥರ ಸಾಥ್.
  • ವಾರಾಂತ್ಯದಲ್ಲಿ ಕಮಾಂಡರ್‌ಗಳ ಮಟ್ಟದ ಸಭೆ ಉದ್ದೇಶಿಸಿ ಮಾತನಾಡಲಿರುವ ಪ್ರಧಾನಿ ಮೋದಿ.

ಕೇವಾಡಿಯಾ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು (ಮಾ.05-ಶುಕ್ರವಾರ) ಗುಜರಾತ್‌ನ ಕೇವಾಡಿಯಾದಲ್ಲಿರುವ ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಏಕತಾ ಪ್ರತಿಮೆಗೆ ಭೇಟಿ ನೀಡಿದರು. ಈ ವೇಳೆ ರಕ್ಷಣಾ ಸಚಿವರಿಗೆ ಭಾರತದ ಮೂರೂ ರಕ್ಷಣಾ ಪಡೆಗಳ ಮುಖ್ಯಸ್ಥರು ಸಾಥ್ ನೀಡಿದರು.

ಏಕತಾ ಪ್ರತಿಮೆಗೆ ಭೇಟಿ ನೀಡಿದ ರಾಜನಾಥ್ ಸಿಂಗ್, ವಿಶ್ವದ ಅತ್ಯಂತ ಎತ್ತರದ ಪ್ರತಿಮೆಯನ್ನು ಕಣ್ತುಂಬಿಕೊಂಡರು. ಈ ವೇಳೆ ಭಾರತದ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ(ಸಿಡಿಎಸ್) ಬಿಪಿನ್ ರಾವತ್, ಭಾರತೀಯ ಭೂಸೇನೆ ಮುಖ್ಯಸ್ಥ ಜನರಲ್ ಎಂಎಂ ನರವಣೆ, ಭಾರತೀಯ ನೌಕಾಸೇನೆ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್ ಹಾಗೂ ಭಾರತೀಯ ವಾಯುಸೇನೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಅರ್‌ಕೆಎಸ್ ಬದೌರಿಯಾ ಉಪಸ್ಥಿತರಿದ್ದರು.

ಬಳಿಕ ಕೇವಾಡಿಯಾದಲ್ಲಿ ಆರಂಭವಾಗಿರುವ ಮೂರೂ ರಕ್ಷಣಾ ಪಡೆಗಳ ಸಂಯೋಜಿತ ಕಮಾಂಡರ್‌ಗಳ ಮಟ್ಟದ ಸಭೆಯಲ್ಲಿ ರಾಜನಾಥ್ ಸಿಂಗ್ ಭಾಗಿಯಾದರು.

ಗಡಿ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸೇನಾ ಶಕ್ತಿ ಸಾಮರ್ಥ್ಯದ ವೃದ್ಧಿಗಾಗಿ ಮೂರೂ ರಕ್ಷಣಾ ಪಡೆಗಳ ಸಂಯೋಜಿತ ಕಮಾಂಡರ್‌ಗಳ ಮಟ್ಟದ ಸಭೆ ಆಯೋಜಿಸಲಾಗಿದೆ.

ಪ್ರಧಾನಿ ಮೋದಿ ಕೂಡ ಈ ವಾರಾಂತ್ಯದಲ್ಲಿ ಕಮಾಂಡರ್‌ಗಳ ಮಟ್ಟದ ಸಭೆಯಲ್ಲಿ ಭಾಗಿಯಾಗಲಿದ್ದು, ಇದೇ ಮೊದಲ ಬಾರಿಗೆ ಸಾಮಾನ್ಯ ಸೈನಿಕರಿಗೂ ಈ ಸಭೆಯಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡಲಾಗಿದೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *