ರಮೇಶ್ ಜಾರಕಿಹೊಳಿ ಬಂಬಲಿಗರಿಂದ ತೀವ್ರಗೊಂಡ ಪ್ರತಿಭಟನೆ; ಆತ್ಮಹತ್ಯೆಗೆ ಯತ್ನ
ಬೆಳಗಾವಿ: ಸಿ.ಡಿ ವಿವಾದದಿಂದ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದ ಅಸಮಾಧಾನಗೊಂಡಿರುವ ಅವರ ಬೆಂಬಲಿಗರು ರಾಜೀನಾಮೆ ವಾಪಸ್ ಪಡೆಯಬೇಕು ಹಾಗೂ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಜಿಲ್ಲೆಯ ಮಾಲದಿನ್ನಿ ಕ್ರಾಸ್ನಲ್ಲಿ ರಮೇಶ್ ಜಾರಕಿಹೋಳಿ ಅಭಿಮಾನಿಗಳು ಹೆದ್ದಾರಿ ತಡೆ ಮಾಡಿ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಕೆಲ ಬೆಂಬಲಿಗರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಯತ್ನಿಸಿದ್ದಾರೆ. ಕೂಡಲೇ ಪೊಲೀಸರು ಯುವಕರನ್ನು ತಡೆದು ಅಸ್ವಸ್ಥಗೊಂಡಿದ್ದವರನ್ನು ಕರೆದೊಯ್ದಿದ್ದಾರೆ. ಇನ್ನು ನಡು ರಸ್ತೆಯಲ್ಲಿ ಟೈರ್ ಸುಟ್ಟು ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟಿಸುತ್ತಿದ್ದಾರೆ.