ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ಬೆನ್ನಲ್ಲೇ ಪ್ರತಿ ಜಿಲ್ಲೆಯಲ್ಲೂ ಗೋ ಶಾಲೆ: ಬಜೆಟ್‌ನಲ್ಲಿ ಸಿಎಂ ಘೋಷಣೆ

ಹೈಲೈಟ್ಸ್‌:

  • ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ಬೆನ್ನಲ್ಲೇ ಸರ್ಕಾರದ ಕ್ರಮ
  • ಪ್ರತಿ ಜಿಲ್ಲೆಯಲ್ಲೂ ಒಂದು ಗೋ ಶಾಲೆ ಸ್ಥಾಪನೆ
  • ದೇಶೀಯ ಗೋ ತಳಿ ಅಭಿವೃದ್ಧಿಗೂ ಸರ್ಕಾರದ ಯೋಜನೆ

ಬೆಂಗಳೂರು: ಗೋ ಹತ್ಯಾ ನಿಷೇಧ ವಿಧೇಯಕವನ್ನು ಮಂಡಿಸಿ ಉಭಯ ಸದನಗಳಲ್ಲೂ ಅಂಗೀಕಾರ ಪಡೆದ ಸರ್ಕಾರ, ಇದೀಗ ಗೋವುಗಳ ಸಂರಕ್ಷಣೆ ನಿಟ್ಟಿನಲ್ಲಿ ಗೋ ಶಾಲೆಗಳ ಸ್ಥಾಪನೆಗೆ ಮುಂದಾಗಿದೆ.

ಪ್ರತಿ ಜಿಲ್ಲೆಗೆ ಒಂದರಂತೆ ಗೋಶಾಲೆ ಸ್ಥಾಪನೆ ಮಾಡಲಾಗುವುದು ಎಂದು ರಾಜ್ಯ ಬಜೆಟ್‌ನಲ್ಲಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ವಯಸ್ಸಾದ ಗೋವುಗಳ ಪಾಲನೆ, ಪೋಷಣೆ ಹಿನ್ನೆಲೆಯಲ್ಲಿ ಈ ಗೋ ಶಾಲೆಗಳು ನೆರವಿಗೆ ಬರಲಿವೆ.

ಇದಲ್ಲದೆ ಸಮಗ್ರ ಗೋ ಸ‌ಂಕುಲ ಸಮೃದ್ಧಿ ಯೋಜನೆಯನ್ನೂ ಯಡಿಯೂರಪ್ಪ ಸರ್ಕಾರ ಜಾರಿಗೆ ತಂದಿದೆ.

ಈ ಕುರಿತಾಗಿ ಬಜೆಟ್‌ನಲ್ಲಿ ವಿವರಣೆ ನೀಡಿರುವ ಸಿಎಂ ಯಡಿಯೂರಪ್ಪ, ಹೊರ ರಾಜ್ಯದ ದೇಶಿ ತಳಿಗಳಾದ ಗಿರ್, ಸಾಹಿವಾಲ್, ಒಂಗೋಲ್, ಥಾರ್ ಪಾರ್ಕರ್ ಮತ್ತು ದೇವಣಿ ತಳಿಗಳನ್ನು ಅಭಿವೃದ್ಧಿಪಡಿಸಿ ರಾಜ್ಯದ ರೈತರಿಗೆ ಪರಿಚಯಿಸಲು ಯೋಜನೆ ಜಾರಿ ಮಾಡಿರೋದಾಗಿ ತಿಳಿಸಿದರು.

 

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *