Siddaramaiah: ಒಟ್ಟು ಬಜೆಟ್​ನಲ್ಲಿ ಶೇ 26ರಷ್ಟು ಸಾಲ; ಇದು ಆರ್ಥಿಕ ದಿವಾಳಿಯಾಗಿರುವುದಕ್ಕೆ ಸಾಕ್ಷಿ: ಸಿದ್ದರಾಮಯ್ಯ

. ಈ ವರ್ಷದ ಬಜೆಟ್ ದಿವಾಳಿ ಬಜೆಟ್. ಬಜೆಟ್​ನಲ್ಲಿ ಏನಾದರೂ ಅಭಿವೃದ್ಧಿ ಕೆಲಸಕ್ಕೆ ದುಡ್ಡು ಕೊಟ್ಟಿದ್ದಾರಾ? ಅದರಲ್ಲಿ ಕೇವಲ 31 ಸಾವಿರ ಕೋಟಿ ಇಟ್ಟಿದ್ದಾರೆ. ಕಳೆದ ವರ್ಷಕ್ಕಿಂತ ತುಂಬಾ ಕಡಿಮೆಯಾಗಿದೆ

Siddaramaiah: ಒಟ್ಟು ಬಜೆಟ್​ನಲ್ಲಿ ಶೇ 26ರಷ್ಟು ಸಾಲ; ಇದು ಆರ್ಥಿಕ ದಿವಾಳಿಯಾಗಿರುವುದಕ್ಕೆ ಸಾಕ್ಷಿ: ಸಿದ್ದರಾಮಯ್ಯ

ಬೆಂಗಳೂರು (ಮಾ. 8): ಈ ಸರ್ಕಾರ ಅನೈತಿಕವಾಗಿ ರಚನೆಯಾಗಿದೆ. ಇದೇ ಹಿನ್ನಲೆ ಅನೈತಿಕ ಸರ್ಕಾರದ ಬಜೆಟ್​ ಕೇಳಬಾರದು ಎಂದು  ನಾವು ಸಭಾತ್ಯಾಗ ಮಾಡಿದ್ದೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು. ರಾಜ್ಯ ಬಜೆಟ್​ ಮಂಡನೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿಗೆ ಪೂರಕವಾದ ಬಜೆಟ್ ಇದಲ್ಲ. ಯಾವುದೇ ಗೊತ್ತುಗುರಿ ಇಲ್ಲದ ಟೊಳ್ಳು ಬಜೆಟ್ ಇದಾಗಿದೆ. ಯಾವ ಇಲಾಖೆಗೆ ಎಷ್ಟು ಖರ್ಚು ಎಂದು ಹೇಳಿಲ್ಲ. ಬಿಚ್ಚಿಡುವುದಕ್ಕಿಂತ ಮುಚ್ಚಿಡುವ ಕೆಲಸ ಆಗಿದೆ. ಈ ಬಜೆಟ್​ನಲ್ಲಿ ಪಾರದರ್ಶಕತೆ ಇಲ್ಲ. ಒಟ್ಟು ಬಜೆಟ್​ನ ಶೇ.26ರಷ್ಟು ಸಾಲವಾಗಿದ್ದು, ಆರ್ಥಿಕ ದಿವಾಳಿಯಾಗಿರುವುದಕ್ಕೆ ಇದೇ ಸಾಕ್ಷಿ. ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಬಜೆಟ್​ನಲ್ಲಿ ಹಿಂದಿನ ಖರ್ಚು, ಮುಂದಿನದರ ಬಗ್ಗೆ ತಿಳಿಸಬೇಕು. ಪ್ರತಿ ಇಲಾಖೆಯ ಖರ್ಚು,ವೆಚ್ಚ ವಿವರಿಸಬೇಕು. ಯಾವ ಇಲಾಖೆಗೆ ಎಷ್ಟು ಖರ್ಚು ಮಾಡಲಾಗಿದೆ. ಈ‌ ವರ್ಷ ಏನು‌ ಖರ್ಚು ಮಾಡುತ್ತಿದ್ದಾರೆ. ಇದರ ಬಗ್ಗೆ ವಿವರಿಸಬೇಕು. ಆದರೆ, ಬಜೆಟ್ ನಲ್ಲಿ ಏನೂ ವಿವರಿಸಿಲ್ಲ. ಬಿಚ್ಚಿಡುವುದಕ್ಕಿಂತ ಮುಚ್ಚಿಟ್ಟಿದ್ದೇ ಹೆಚ್ಚು ಎಂದು ರಾಜ್ಯ ಸರ್ಕಾರದ ಬಜೆಟ್ ಗೆ  ಅಸಮಾಧಾನ ವ್ಯಕ್ತಪಡಿಸಿದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *