ರಾಜ್ಯದಲ್ಲಿ ಸೋಂಕು ಕೊಂಚ ಇಳಿಕೆ 31531 ಮಂದಿಗೆ ಸೋಂಕು:403 ಜನರ ಸಾವು

ರಾಜ್ಯದಲ್ಲಿ ಇಂದು ಹೊಸ ಸೋಂಕಿನ ಪ್ರಕರಣ ಕೊಂಚ ಇಳಿಕೆ ಕಂಡಿದ್ದು ಇಂದು 31531 ಪ್ರಕರಣಗಳು ದಾಖಲಾಗಿವೆ. ಒಂದೇ ದಿನ 403 ಜನರು ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 21,837ಕ್ಕೆ ಏರಿಕೆಯಾಗಿದೆ.
ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್‌ ಬುಲೆಟಿನ್ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಇಂದು 141 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಮೃತರ ಸಂಖ್ಯೆ 9483 ಕ್ಕೆ ಏರಿಕೆಯಾಗಿದೆ.
ನಗರದಲ್ಲಿ ಇಂದು 8344 ಮಂದಿಗೆ ಹೊಸ ಸೋಂಕು ತಗುಲಿದ್ದು, ಒಟ್ಟು 13162 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ 1581457 ಮಂದಿ ಮನೆಗೆ ತೆರಳಿದ್ದಾರೆ. ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1051058ಕ್ಕೆ ಹೆಚ್ಚಳ ಕಂಡಿದೆ.
ಅದೇರೀತಿ ರಾಜ್ಯದಲ್ಲಿ 36475 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ‌.ಹೀಗಾಗಿ ಸೋಂಕಿತರಿಗಿಂತ ಬಿಡುಗಡೆ ಯಾಗುತ್ತಿರುವ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದೆ.
ರಾಜ್ಯದಲ್ಲಿ ಒಟ್ಟು 600147 ಸಕ್ರಿಯ ಪ್ರಕರಣಗಳಿದ್ದು, ಒಟ್ಟು ಸೋಂಕಿತರ ಸಂಖ್ಯೆ 2003462ಕ್ಕೆ ಏರಿಕೆಯಾಗಿದೆ.
ಜಿಲ್ಲೆಗಳಲ್ಲಿ ಇಂದು ದಾಖಲಾಗಿರುವ ಪ್ರಕರಣಗಳು: ಬಾಗಲಕೋಟೆ 431, ಬಳ್ಳಾರಿ 1729, ಬೆಳಗಾವಿ 1762 ಬೆಂಗಳೂರು ಗ್ರಾಮಾಂತರ 1082, ಬೆಂಗಳೂರು ನಗರ 8344, ಬೀದರ್ 129, ಚಾಮರಾಜನಗರ 440, ಚಿಕ್ಕಬಳ್ಳಾಪುರ 558, ಚಿಕ್ಕಮಗಳೂರು 963, ಚಿತ್ರದುರ್ಗ 640, ದಕ್ಷಿಣ ಕನ್ನಡ 957, ದಾವಣಗೆರೆ 1155, ಧಾರವಾಡ 937, ಗದಗ ,453, ಹಾಸನ 1182, ಹಾವೇರಿ 184, ಕಲಬುರಗಿ 645, ಕೊಡಗು 191, ಕೋಲಾರ 569, ಕೊಪ್ಪಳ 617, ಮಂಡ್ಯ 709, ಮೈಸೂರು 1811, ರಾಯಚೂರು 464, ರಾಮನಗರ 403, ಶಿವಮೊಗ್ಗ 643, ತುಮಕೂರು 2138, ಉಡುಪಿ 745, ಉತ್ತರ ಕನ್ನಡ 1087, ವಿಜಯಪುರ 330 ಮತ್ತು ಯಾದಗಿರಿಯಲ್ಲಿ 230 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *