ಕಲಬುರಗಿ: ಸಂಘ ಪರಿವಾರದಿಂದ ಉಚಿತ ಆಂಬುಲೆನ್ಸ್ ಸೇವೆ
ರಾಷ್ಟ್ರೀಯ ಸ್ವಯಂಸೇವಕ ಸಂಘ ಕಲಬುರಗಿ ವತಿಯಿಂದ ನಗರದಲ್ಲಿ ಉಚಿತವಾಗಿ ಆಂಬುಲೆನ್ಸ್ ಸೇವೆಯನ್ನು ಇಂದು ನಗರದಲ್ಲಿ ಪ್ರಾರಂಭಿಸಲಾಯಿತು.
ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್, ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರು ಉಚಿತ ಆಂಬುಲೆನ್ಸ್ ಸೇವೆಯನ್ನು ಉದ್ವಾಟಿಸಿ ಮಾತನಾಡಿದರು.
ನಗರದಲ್ಲಿ ಮೊಟ್ಟ ಮೊದಲ ಬಾರಿಗೆ ಕೋವಿಡ್ ಕೇರ್ ಸೆಂಟರ್ ಪ್ರಾರಂಭ ಮಾಡಿದ್ದು, ಇದೀಗ ಬಡ ಜನರಿಗೆ ಕೋವಿಡ್ ಸಂದರ್ಭದಲ್ಲಿ ಯಾವುದೇ ತೊಂದರೆಯಾಗದಂತೆ ಈ ಸೇವೆ ನೀಡಲಾಗುತ್ತಿದೆ ಎಂದರು.
ಕೊರೋನ ಪಾಸಿಟಿವ್ ಕಂಡು ಬಂದ ನಂತರ ಸೊಂಕಿತರಿಗೆ ಸಮಸ್ಯೆ ಆಗಬಾರದು ಎನ್ನುವ ನಿಟ್ಟಿನಲ್ಲಿ ಈ ಸೇವೆ ಪ್ರಾರಂಭಿಸಲಾಗಿದೆ ಎಂದರು.
ಸಂಘ ಪರಿವಾರದ ಪ್ರಮುಖರಾದ ಕೃಷ್ಣ ಜೋಶಿ ಜೀ, ವಿಭಾಗ ಪ್ರಚಾರಕರಾದ ವಿಜಯ ಮಹಾಂತೇಶ ಜೀ, ರಮೇಶ್ ತಿಪನೂರ, ಕಮಲಾಪುರೇ, ದಯಾಘನ ದಾರವಾಡಕರ್, ಸಿದ್ದಾಜೀ ಪಾಟೀಲ್, ಉಮೇಶ್ ಪಾಟೀಲ್, ಶ್ರೀನಿವಾಸ ದೇಸಾಯಿ, ದಿವ್ಯಾ ಹಾಗರಗಿ ಸೇರಿದಂತೆ ಅನೇಕ ಸಂಘ ಪರಿವಾರದ ಸದಸ್ಯರು ಉಪಸ್ಥಿತರಿದ್ದರು