ಸರಕಾರ ಮುಚ್ಚಿಟ್ಟರೂ ಯಾವ ಆಸ್ಪತ್ರೆಯಲ್ಲಿ ಏನೆಲ್ಲಾ ಅನಾಹುತವಾಗಿದೆ ಎಂಬ ಮಾಹಿತಿ ನಮಗೆ ಬರುತ್ತದೆ: ಡಿಕೆಶಿ

ಹೈಲೈಟ್ಸ್‌:

  • ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಡಿಕೆ ಶಿವಕುಮಾರ್‌
  • ಯಾವ ಆಸ್ಪತ್ರೆಯಲ್ಲಿ ಅನಾಹುತವಾಗಿದೆ ಎಂಬುವುದು ಗೊತ್ತು
  • ನನಗೂ ಬಳ್ಳಾರಿ ಪ್ರವಾಸಕ್ಕೆ ಅನುಮತಿ ನೀಡಿಲ್ಲ ಎಂದ ಮಾಜಿ ಸಚಿವ

ಬೆಂಗಳೂರು: ತನ್ನ ವೈಫಲ್ಯ ಮುಚ್ಚಿಡಲು ಬಿಜೆಪಿ ಸರಕಾರ ಎಷ್ಟೇ ಪ್ರಯತ್ನಿಸಿದರೂ ಯಾವ ಆಸ್ಪತ್ರೆಯಲ್ಲಿ ಏನೆಲ್ಲಅನಾಹುತವಾಗಿದೆ ಎನ್ನುವ ಮಾಹಿತಿ ಕಾಂಗ್ರೆಸ್‌ಗೆ ಬರುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಯಡಿಯೂರಪ್ಪ ಅವರು ಪ್ರತಿಪಕ್ಷದ ನಾಯಕರಾಗಿದ್ದಾಗ ಜಿಲ್ಲಾ ಪ್ರವಾಸ ಮಾಡಿ ಅಧಿಕಾರಿಗಳ ಸಭೆ ನಡೆಸಿರಲಿಲ್ಲವೇ? ಸಿದ್ದರಾಮಯ್ಯ ಈಗ ಪ್ರತಿಪಕ್ಷದ ನಾಯಕರು. ಅವರಿಗೆ ಅಡ್ಡಿಪಡಿಸುತ್ತಿದ್ದಾರೆ. ನನಗೂ ಬಳ್ಳಾರಿ ಪ್ರವಾಸಕ್ಕೆ ಅನುಮತಿ ನೀಡಿಲ್ಲ,” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾನ್ಸಂಟ್ರೇಟರ್‌ ಹಸ್ತಾಂತರ!
ಅಟಿಕಾ ಗೋಲ್ಡ್‌ ಸಂಸ್ಥೆ 25 ಲಕ್ಷ ರೂ. ಮೊತ್ತದ 7.5 ಲೀಟರ್‌ ಸಾಮರ್ಥ್ಯ ಹೊಂದಿರುವ ಆಕ್ಸಿಜನ್‌ ಕಾನ್ಸಂಟ್ರೇಟರ್‌ಗಳನ್ನು ಕಾಂಗ್ರೆಸ್‌ಗೆ ನೀಡಿತು. ಇದನ್ನು ಡಿ.ಕೆ.ಶಿವಕುಮಾರ್‌ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪಕ್ಷದ ಪರವಾಗಿ ಸ್ವೀಕರಿಸಿದರು. ಪಕ್ಷದಿಂದ ಉತ್ತಮ ಕೆಲಸ ಮಾಡುತ್ತಿರುವುದರಿಂದ ಅನೇಕ ದಾನಿಗಳು ಕೊಡುಗೆ ನೀಡಲು ಮುಂದೆ ಬಂದಿದ್ದಾರೆ ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *