Unlock in Karnataka : ಜೂ.14 ರಿಂದಲೇ ರಾಜ್ಯದಲ್ಲಿ ‘ಅನ್ ಲಾಕ್’ ಫಿಕ್ಸ್!

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಂತಹಂತವಾಗಿ ಲಾಕ್ ಡೌನ್ ಸಡಿಲಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇಂದು ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.

ಇಂದು ಸಿಎಂ ಯಡಿಯೂರಪ್ಪ(BS Yediyurappa) ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಮಹತ್ವದ ಸಭೆ ನಡೆಯಲಿದ್ದು, ಸೋಮವಾರದಿಂದ(ಜೂ.14) ಹಂತ ಹಂತವಾಗಿ ನಿರ್ಬಂಧ ತೆರವು ಮಾಡುವುದು ಬಹುತೇಕ ಫಿಕ್ಸ್ ಆಗಿದೆ ಎನ್ನಲಾಗಿದೆ.

ಕೊರೋನಾ ಎರಡನೇ ಅಲೆ ಪ್ರಭಾವ ತಗ್ಗುತ್ತಿದ್ದರೂ ಕೆಲವು ಜಿಲ್ಲೆಗಳಲ್ಲಿ ಗಂಭೀರ ಪರಿಸ್ಥಿತಿಯಿದೆ. ಈ ಹಿನ್ನೆಲೆಯಲ್ಲಿ ರಾಜ್ಯವ್ಯಾಪಿ ಏಕಸ್ವರೂಪದ ‘ಅನ್ ಲಾಕ್'(Unlock) ಜಾರಿಗೊಳಿಸುವುದು ಅನುಮಾನ. ತಜ್ಞರ ಸಲಹೆ ಪ್ರಕಾರ ಹೊಸ ಪ್ರಕರಣಗಳು 5 ಸಾವಿರಕ್ಕಿಂತ ಕಡಿಮೆ ಹಾಗೂ ಪಾಸಿಟಿವಿಟಿ ದರ ಶೇ. 5ಕ್ಕಿಂತಲೂ ಕಡಿಮೆ ಇದ್ದರೆ ಮಾತ್ರ ಅನ್ ಲಾಕ್ ಮಾಡುವುದು ಸೂಕ್ತ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *