ಬಿಜೆಪಿ ಸಂಸದರು ಭಾಷಾ ದುರಭಿಮಾನಿಗಳು: ಎಚ್ ಡಿಕೆ ವಾಗ್ದಾಳಿ
ಬೆಂಗಳೂರು-ರಾಜ್ಯದಿಂದ ಆಯ್ಕೆಯಾಗಿ ಹೋಗಿರುವ ಬಿಜೆಪಿ ಸಂಸದರು ‘ಭಾಷಾ ದುರಭಿಮಾನಿಗಳು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ..
ಮೇಕೆದಾಟು ಯೋಜನೆ ವಿಳಂಬದ ಬಗ್ಗೆ ಬಿಜೆಪಿ ಸಂಸದರು’ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನೆ ಮಾಡಿ ಉತ್ತರ ಪಡೆದುಕೊಂಡು ಬರಬೇಕು. ಇಲ್ಲವೇ ಬಾಕಿ ಇರುವ ಪರಿಸರ ಅನುಮತಿಯನ್ನು ಶೀಘ್ರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಒತ್ತಡ ಹೇರಿತ್ತೇ ಅದರ ಮಾತು ಕೇಳಿ ಅನುಮತಿ ವಿಳಂಬ ಮಾಡಲಾಯಿತೇ ಈ ಬಗ್ಗೆ ಪ್ರಧಾನಿ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಮೇಕೆದಾಟು ಯೋಜನೆ ಜಾರಿಗೆ ತಂದು ನನ್ನ ಸರ್ಕಾರ ಧೈರ್ಯ ಪ್ರದರ್ಶಿಸಿತ್ತು. ಪರಿಸರ ಅನುಮತಿ ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ, ಈ ವರೆಗೆ ಅನುಮತಿ ಸಿಕ್ಕಿಲ್ಲ. ಇತ್ತ, ಯೋಜನೆ ವಿರುದ್ಧ ಅರ್ಜಿಗಳು ಸಲ್ಲಿಕೆಯಾಗುತ್ತಾ ಬಂದವು. ಇದೆಲ್ಲ ಗಮನಿಸಿದರೆ ಯೋಜನೆ ತಡೆಯಲು ತಮಿಳುನಾಡು–ಕೇಂದ್ರ ಷಡ್ಯಂತ್ರ ಹೆಣೆದ ಅನುಮಾನ ಮೂಡುತ್ತಿದೆ ಎಂದಿದ್ದಾರೆ.
ತಮಿಳುನಾಡು ಅಡ್ಡಗಾಲು
ತಮಿಳುನಾಡಿನ ಒತ್ತಡಕ್ಕೆ ಮಣಿದು ಮೇಕೆ ದಾಟು ಜಲಾಯಶಕ್ಕೆ ಅನುಮತಿ ನೀಡುವುದನ್ನು ಕೇಂದ್ರ ಸರ್ಕಾರ ಮುಂದೂಡುತ್ತಾ ಬಂದರೆ ಕನ್ನಡಿಗರಿಗೆ ಬಗೆದ ದ್ರೋಹ ಎಂದು ಹೇಳಿದ್ದಾರೆ.
ಮೇಕೆದಾಟು ಜಲಾಯಶಕ್ಕೆ ಅನುಮತಿ ನೀಡಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒತ್ತಡ ಹೇರಲಾಗಿದೆ ಎಂದು ತಮಿಳುನಾಡು ಮಾಜಿ ಮುಖ್ಯಮಂತ್ರಿ ಪಳನಿಸ್ವಾಮಿ ಹೇಳಿದ್ದಾರೆ.ಅವರ ಒತ್ತಡಕ್ಕೆ ಮಣಿಯಬಾರದು ಎಂದು ಹೇಳಿದ್ದಾರೆ.ಅವರ ಒತ್ತಡಕ್ಕೆ ಮಣಿಯಬಾರದು ಎಂದಿದ್ದಾರೆ