ನೈಸ್‌ ಕಂಪನಿಗೆ ₹2 ಕೋಟಿ ಪರಿಹಾರ ನೀಡುವಂತೆ ಎಚ್‌ಡಿ ದೇವೇಗೌಡರಿಗೆ ಆದೇಶಿಸಿದ ನ್ಯಾಯಾಲಯ

ಹೈಲೈಟ್ಸ್‌:

  • ನೈಸ್‌ ಕಂಪನಿ ವಿರುದ್ಧ ಮಾಡಿದ್ದ ಆರೋಪ ಸಾಬೀತುಪಡಿಸುವಲ್ಲಿ ವಿಫಲ
  • ₹2 ಕೋಟಿ ಪರಿಹಾರ ನೀಡುವಂತೆ ಎಚ್‌ಡಿ ದೇವೇಗೌಡರಿಗೆ ನ್ಯಾಯಾಲಯ ಆದೇಶ
  • ಬೆಂಗಳೂರಿನ ಸಿಟಿ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲನಗೌಡ ತೀರ್ಪು

ಬೆಂಗಳೂರು: ನಂದಿ ಇನ್‌ಫ್ರಾಸ್ಟ್ರಕ್ಚರ್‌ ಕಾರಿಡಾರ್‌ (ನೈಸ್‌) ಕಂಪನಿ ವಿರುದ್ಧ ಮಾಡಿದ್ದ ಆರೋಪ ಸಾಬೀತುಪಡಿಸುವಲ್ಲಿ ವಿಫಲರಾದ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ಕಂಪನಿಗೆ

2 ಕೋಟಿ ರೂ. ಪರಿಹಾರ ನೀಡಬೇಕೆಂದು ಬೆಂಗಳೂರು ಸಿಟಿ ಸಿವಿಲ್‌ ಕೋರ್ಟ್‌ ಆದೇಶಿಸಿದೆ.

ಖಾಸಗಿ ವಾಹಿನಿಗೆ ನೀಡಿದ್ದ ಸಂದರ್ಶನದಲ್ಲಿ ದೇವೇಗೌಡರು ಸಂಸ್ಥೆಯ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಿ ನೈಸ್‌ ಕಂಪನಿಯು ಮಾನನಷ್ಟ ಮೊಕದ್ದಮೆ ಹೂಡಿತ್ತು. ಕಂಪನಿ ವಿರುದ್ಧ ಆರೋಪ ಸಾಬೀತುಪಡಿಸುವಲ್ಲಿ ದೇವೇಗೌಡರು ವಿಫಲರಾಗಿದ್ದಾರೆ. ಹೀಗಾಗಿ ಕಂಪನಿಗೆ 2 ಕೋಟಿ ರೂ. ನಷ್ಟ ಪರಿಹಾರ ಕಟ್ಟಿಕೊಡಬೇಕೆಂದು ಬೆಂಗಳೂರಿನ ಸಿಟಿ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲನಗೌಡ ತೀರ್ಪು ನೀಡಿದ್ದಾರೆ.

2012ರಲ್ಲಿ ಕಂಪನಿಯು ಗೌಡರ ವಿರುದ್ಧ ಸಿವಿಲ್‌ ಮಾನನಷ್ಟ ಮೊಕದ್ಧಮೆ ಹೂಡಿತ್ತು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *