ಮುಂಬರುವ ಪಂಚರಾಜ್ಯ ಚುನಾವಣೆಗಳಿಗೆ ಈಗಿನಿಂದಲೇ ಸಿದ್ಧತೆ ಆರಂಭಿಸಿದ ಬಿಜೆಪಿ

ಹೈಲೈಟ್ಸ್‌:

  • ಮುಂದಿನ ವರ್ಷಾರಂಭದಲ್ಲಿ ನಡೆಯಲಿದೆ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ
  • ಪಂಚರಾಜ್ಯ ಚುನಾವಣೆಗಳಿಗೆ ಈಗಿನಿಂದಲೇ ಸಿದ್ಧತೆ ಶುರು ಮಾಡಿಕೊಂಡ ಬಿಜೆಪಿ
  • ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್‌, ಮಣಿಪುರ& ಗೋವಾ ರಾಜ್ಯಗಳಿಗೆ ಚುನಾವಣೆ

ಹೊಸದಿಲ್ಲಿ: ಮುಂದಿನ ವರ್ಷಾರಂಭದಲ್ಲಿ ನಡೆಯುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಬಿಜೆಪಿ ಈಗಿನಿಂದಲೇ ಸಿದ್ಧತೆ ಶುರು ಮಾಡಿಕೊಂಡಿದೆ. ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್‌, ಮಣಿಪುರ ಮತ್ತು ಗೋವಾ ರಾಜ್ಯಗಳಲ್ಲಿ ಬರುವ ಮಾರ್ಚ್- ಏಪ್ರಿಲ್‌ ಅವಧಿಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿವೆ. ಈ ರಾಜ್ಯಗಳಲ್ಲಿನ ರಾಜಕೀಯ ಸ್ಥಿತಿಗತಿ ಮತ್ತು ಆಡಳಿತಾತ್ಮಕ ವಿಷಯಗಳ ಕುರಿತು ಶನಿವಾರ ಪಕ್ಷದ ಹಿರಿಯ ಮುಖಂಡರು ವಿಸ್ತೃತ ಸಮಾಲೋಚನೆ ನಡೆಸಿದರು. ಐದರ ಪೈಕಿ ಪಂಜಾಬ್‌ ಹೊರತುಪಡಿಸಿ ಉಳಿದ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಸರಕಾರ ಇದೆ. ಈ ಹಿನ್ನೆಲೆಯಲ್ಲಿ ಪಂಚ ರಾಜ್ಯಗಳ ಚುನಾವಣೆ ಬಿಜೆಪಿ ಪಾಲಿಗೆ ಅತ್ಯಂತ ಪ್ರತಿಷ್ಠೆಯ ಹೋರಾಟ ಎನಿಸಲಿದೆ.

ಅದರಲ್ಲಿಯೂ ರಾಜಕೀಯ ಏಳುಬೀಳಿನ ದೃಷ್ಟಿಯಿಂದ ಅತಿ ಮಹತ್ವದ ರಾಜ್ಯ ಎನಿಸಿರುವ ಉತ್ತರಪ್ರದೇಶದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಬಿಜೆಪಿಯ ಯೋಗಿ ಆದಿತ್ಯನಾಥ್‌ ಸರಕಾರಕ್ಕೆ ಇಲ್ಲಿಅಧಿಕಾರ ಉಳಿಸಿಕೊಳ್ಳುವ ಸವಾಲು ಎದುರಾಗಿದೆ. ರಾಜ್ಯದಲ್ಲಿನ ಬಿಕ್ಕಟ್ಟು ಕುರಿತು ಬಿಜೆಪಿ ವರಿಷ್ಠರು ಈಗಾಗಲೇ ಹಲವು ಸುತ್ತಿನ ಚರ್ಚೆ ನಡೆಸಿದ್ದಾರೆ. ಶನಿವಾರದ ಸಭೆಯಲ್ಲಿ ಐದು ರಾಜ್ಯಗಳ ಸ್ಥಿತಿಗತಿ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು. ಇನ್ನು ಆರೇಳು ತಿಂಗಳಲ್ಲಿ ನಡೆಯುವ ವಿಧಾನಸಭೆ ಚುನಾವಣೆಯೇ ಪ್ರಮುಖ ಅಜೆಂಡಾ ಆಗಿತ್ತು ಎಂದು ಬಿಜೆಪಿ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.

ಹೇಮಂತ್‌ ಕರ್ಕರೆಯನ್ನು ದೇಶಭಕ್ತ ಎನ್ನಲು ಸಾಧ್ಯವಿಲ್ಲ; ಪ್ರಗ್ಯಾ ಸಿಂಗ್‌ ಠಾಕೂರ್ ವಿವಾದಾತ್ಮಕ ಹೇಳಿಕೆ

ಸಭೆಯಲ್ಲಿ ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕೇಂದ್ರ ಸಚಿವರಾದ ಅಮಿತ್‌ ಶಾ, ರಾಜನಾಥ್‌ ಸಿಂಗ್‌, ನಿರ್ಮಲಾ ಸೀತಾರಾಮನ್‌, ನರೇಂದ್ರ ಸಿಂಗ್‌ ತೋಮರ್‌, ಸ್ಮೃತಿ ಇರಾನಿ, ಕಿರಣ್‌ ರಿಜುಜು ಸೇರಿ ಹಲವು ಪ್ರಮುಖರು ಪಾಲ್ಗೊಂಡಿದ್ದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *