Punjab Elections: ಇಂದು ಪಂಜಾಬ್ ಸಿಎಂ ಅಭ್ಯರ್ಥಿ ಘೋಷಣೆ ಮಾಡಲಿರುವ ರಾಹುಲ್ ಗಾಂಧಿ
ನವದೆಹಲಿ, ಫೆ. 5: ಪಂಜಾಬ್ ವಿಧಾನಸಭಾ ಚುನಾವಣೆಯನ್ನು (Punjab Assembly Elections) ಗೆದ್ದೇ ಗೆಲ್ಲುವುದಾಗಿ ಕಾಂಗ್ರೆಸ್ (Congress) ವಿಶ್ವಾಸ ಇಟ್ಟುಕೊಂಡಿದೆ. ಆದರೆ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ (Chief Minister Charanjith Sing Chenni) ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು (Punjab Congress President Navjoth Sing Sidhu) ನಡುವೆ ಉನ್ನತ ಹುದ್ದೆಯ ಮೇಲೆ ಕಣ್ಣಿದ್ದು ಮುಖ್ಯಮಂತ್ರಿ ಅಭ್ಯರ್ಥಿಯನ್ನು (Chief Ministerial Candidate) ಘೋಷಣೆ ಮಾಡಬೇಕೆಂಬ ಭಾರೀ ಒತ್ತಡ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಎಐಸಿಸಿಯ ಮಾಜಿ ಅಧ್ಯಕ್ಷ ಹಾಗೂ ಸಂಸದ ರಾಹುಲ್ ಗಾಂಧಿ (AICC Former President and Member of Parliament Rahul Gandhi) ಅವರು ಇಂದು (ಫೆಬ್ರವರಿ 6ಕ್ಕೆ) ಪಂಜಾಬಿನ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡಲಿದ್ದಾರೆ.
ಲೂಧಿಯಾನದಲ್ಲಿ ಸಿಎಂ ಅಭ್ಯರ್ಥಿ ಪ್ರಕಟಇಂದು ಪಂಜಾಬ್ ಪ್ರವಾಸ ಕೈಗೊಳ್ಳಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೂಧಿಯಾನದ ಹರ್ಷೀಲಾ ರೆಸಾರ್ಟ್ ನಲ್ಲಿ ಮಧ್ಯಾಹ್ನ 1 ಗಂಟೆಗೆ ವರ್ಚ್ಯುಯಲ್ ರ್ಯಾಲಿ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ರ್ಯಾಲಿ ವೇಳೆಯೇ ಪಂಜಾಬ್ ಚುನಾವಣೆಗೆ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದನ್ನು ಘೋಷಣೆ ಮಾಡಲಿದ್ದಾರೆ.
ಹಾಲಿ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಾಗುತ್ತದೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದು ಬಂದಿದೆ.
ಚರಣಜಿತ್ ಸಿಂಗ್ ಚನ್ನಿಯೇ ಫವರೀಟ್
ಜನವರಿ 27ರಂದು ಪಂಜಾಬಿನ ಜಲಂಧರ್ನ ಮಿಥಾಪುರದಲ್ಲಿ “ನವಿ ಸೋಚ್ ನಯಾ ಪಂಜಾಬ್’ ಎಂಬ ಹೆಸರಿನ ವರ್ಚುವಲ್ ರ್ಯಾಲಿ ಉದ್ದೇಶಿಸಿ ಮಾತನಾಡುತ್ತಿದ್ದ ರಾಹುಲ್ ಗಾಂಧಿ ಅವರು, ‘ಶೀಘ್ರವೇ ಕಾಂಗ್ರೆಸ್ ಕಾರ್ಯಕರ್ತರು ಪಂಜಾಬಿನ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ನಿರ್ಧರಿಸಲಿದ್ದಾರೆ’ ಎಂದು ಹೇಳಿದ್ದರು.
ಅದೇ ರೀತಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಚರಣಜಿತ್ ಸಿಂಗ್ ಚನ್ನಿ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸುವಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಚರಣಜಿತ್ ಸಿಂಗ್ ಚನ್ನಿ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡುವುದಾಗಿ ತಿಳಿದು ಬಂದಿದೆ.
ಪಂಜಾಬ್ ಚುನಾವಣೆ ಮುಂದೂಡಿಕೆ
ಕೇಂದ್ರ ಚುನಾವಣಾ ಆಯೋಗ (Election Commission) ಫೆಬ್ರವರಿ 14ರ ಬದಲು ಫೆಬ್ರವರಿ 20ರಂದು ಪಂಜಾಬ್ನಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಸಲು ನಿರ್ಧರಿಸಿದೆ. ಪಂಜಾಬಿನಲ್ಲಿ ಗುರು ರವಿದಾಸ್ ಜಯಂತಿ ಅತ್ಯಂತ ದೊಡ್ಡ ಆಚರಣೆ. ಗುರು ರವಿದಾಸ್ ಜಯಂತಿ ಆಚರಣೆಗಾಗಿ ರಾಜ್ಯದ ಪರಿಶಿಷ್ಠ ಜಾತಿ ಸಮುದಾಯದ ಭಕ್ತರು ಫೆಬ್ರವರಿ 10 ರಿಂದ 16ರವರೆಗೆ ವಾರಣಾಸಿಗೆ ತೆರಳಲಿದ್ದಾರೆ.
ಹೀಗೆ ಪ್ರವಾಸ ಕೈಗೊಳ್ಳುವ ಪರಿಶಿಷ್ಟ ಜಾತಿ ಸಮುದಾಯ ಮತದಾರರ ಸಂಖ್ಯೆ ಸುಮಾರು 20 ಪಕ್ಷ. ಪಂಜಾಬಿನಲ್ಲಿ ಶೇಕಡಾ 32ರಷ್ಟು ಪರಿಶಿಷ್ಟ ಜಾತಿಗಳ ಸಮುದಾಯದ ಮತದಾರರಿದ್ದು ಆ ಪೈಕಿ 20 ಲಕ್ಷದಷ್ಟು ಜನ ಮತ ಚಲಾಯಿಸಲು ಸಾಧ್ಯವಾಗುವುದಿಲ್ಲ.
ಚುನಾವಣಾ ಆಯೋಗಕ್ಕೆ ಸಿಎಂ ಚನ್ನಿ ಪತ್ರ
ಮತದಾನ ಮಾಡುವುದು ಅವರ ಸಾಂವಿಧಾನಿಕ ಹಕ್ಕು ಆದುದರಿಂದ ಮತದಾನದ ದಿನಾಂಕವನ್ನು ಮುಂದೂಡಬೇಕು ಎಂದು ಮುಖ್ಯಮಂತ್ರಿ ಚರಣಜಿತ್ ಚನ್ನಿ ಅವರು ಪತ್ರದ ಮೂಲಕ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು.
ಆ ಮನವಿಗೆ ಸ್ಪಂದಿಸಿರುವ ಚುನಾವಣಾ ಆಯೋಗ ಮತದಾನದ ದಿನಾಂಕವನ್ನು ಫೆಬ್ರವರಿ 14ರಿಂದ 20ಕ್ಕೆ ಅಂದರೆ 6 ದಿನ ಮುಂದೂಡಿದೆ. ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.