Gali Janardhana Reddy: ಮಾಜಿ ಸಚಿವ ಗಾಲಿ ಜನಾರ್ದನ್​​ ರೆಡ್ಡಿಗೆ ಕೊರೋನಾ ಪಾಸಿಟಿವ್​​​

ತನಗೆ ಕೊರೋನಾ ಬಂದ ಬಗ್ಗೆ ಫೇಸ್​​ಬುಕ್​​ನಲ್ಲಿ ಗಾಲಿ ಜನಾರ್ದನ್​​ ರೆಡ್ಡಿ ಹೀಗೆ ಬರೆದುಕೊಂಡಿದ್ಧಾರೆ. ನನಗೆ ಕೊರೋನಾ ಸೋಂಕು ಧೃಡಪಟ್ಟಿದೆ. ಈ ಹಿನ್ನೆಲೆಯಲ್ಲಿ ನಾನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ತಿಳಿಸಿದ್ದಾರೆ.

ಬೆಂಗಳೂರು(ಆ.30): ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಸಚಿವ ಗಾಲಿ ಜನಾರ್ದನ್​​ ರೆಡ್ಡಿಯವರಿಗೆ ಕೊರೋನಾ ಪಾಸಿಟಿವ್​​ ಕಾಣಿಸಿಕೊಂಡಿದೆ. ಕೊರೋನಾ ಪಾಸಿಟಿವ್​ ಕಾಣಿಸಿಕೊಂಡ ಕಾರಣ ವೈದ್ಯರ ಸಲಹೆ ಮೇರೆಗೆ ಸರ್ಕಾರದ ಪ್ರೋಟೋಕಾಲ್​ ಪ್ರಕಾರ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಜನಾರ್ದನ್​​ ರೆಡ್ಡಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಜನಾರ್ದನ್​​ ರೆಡ್ಡಿ ಇಂದು ಬಳ್ಳಾರಿಗೆ ತೆರಳಬೇಕಿತ್ತು. ಇದಕ್ಕೂ ಮುನ್ನ ನಿನ್ನೆ ಸಂಜೆಯೇ ಜನಾರ್ದನ್​ ರೆಡ್ಡಿ ಅನಾರೋಗ್ಯದ ಕಾರಣ ಕೊರೋನಾ ಪರೀಕ್ಷೆ ಮಾಡಿಸಿದ್ದರು. ಈ ವೇಳೆ ಇವರಿಗೆ ಕೊರೋನಾ ಸೋಂಕು ಇರುವುದು ಖಾತ್ರಿಯಾಗಿದೆ. ಈ ಬಗ್ಗೆ ಖುದ್ದು ಮಾಜಿ ಸಚಿವರೇ ತನಗೆ ಕೊರೋನಾ ಪಾಸಿಟಿವ್​​ ಬಂದ ಬಗ್ಗೆ ಖಾತ್ರಿಪಡಿಸಿದ್ಧಾರೆ.

ತನಗೆ ಕೊರೋನಾ ಬಂದ ಬಗ್ಗೆ ಫೇಸ್​​ಬುಕ್​​ನಲ್ಲಿ ಗಾಲಿ ಜನಾರ್ದನ್​​ ರೆಡ್ಡಿ ಹೀಗೆ ಬರೆದುಕೊಂಡಿದ್ಧಾರೆ. ನನಗೆ ಕೊರೋನಾ ಸೋಂಕು ಧೃಡಪಟ್ಟಿದೆ. ಈ ಹಿನ್ನೆಲೆಯಲ್ಲಿ ನಾನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ತಿಳಿಸಿದ್ದಾರೆ.

ಇನ್ನು, ಕೊರೋನಾ ಪಾಸಿಟಿವ್​ ಬಂದಿದ್ದರಿಂದ ನನ್ನ ಪ್ರಾಣ ಸ್ನೇಹಿತನಾದ ಸಚಿವ ಬಿ. ಶ್ರೀರಾಮುಲು ಅವರ ತಾಯಿಯವರ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಆಸ್ಪತ್ರೆಯಲ್ಲಿ ಉತ್ತಮ ವೈದ್ಯರ ತಂಡ ನನಗೆ ಚಿಕಿತ್ಸೆ ನೀಡುತ್ತಿದೆ. ನನಗೆ ಯಾವುದೇ ರೋಗದ ಲಕ್ಷಣಗಳು ಇಲ್ಲದಿದ್ದರೂ ಕೊರೋನಾ ಪಾಸಿಟಿವ್ ಬಂದಿದೆ ಎಂದು ಜನಾರ್ದನ್​​ ರೆಡ್ಡಿ ಬರೆದುಕೊಂಡಿದ್ದಾರೆ.

ನಿಮ್ಮೆಲ್ಲರ ಆಶೀರ್ವಾದದಿಂದ ಆದಷ್ಟು ಬೇಗ ಗುಣಮುಖನಾಗಿ ಮನೆಗೆ ಮರಳಲಿದ್ದೇನೆ ಎಂದಿದ್ದಾರೆ. ಇನ್ನೂ ಜನಾರ್ದನ ರೆಡ್ಡಿ ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ಸೇರಿದಂತೆ ಹಲವರು ಹಾರೈಸಿದ್ದಾರೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *