Delhi Air Pollution: ದೆಹಲಿಯಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ವಾಯುಮಾಲಿನ್ಯ; ಆತಂಕದಲ್ಲಿ ಜನರು

ಈ ಬಾರಿ ದೆಹಲಿಯಲ್ಲಿ ಬೆಳೆ ತ್ಯಾಜ್ಯ ಸುಡುವುದನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಲಾಗಿತ್ತು. ಅದಕ್ಕೆ ಬದಲಾಗಿ ತಾಜ್ಯದ ಮೇಲೆ ಕೆಮಿಕಲ್ ಸಿಂಪಡಿಸಿ ಅಲ್ಲೇ ಕೊಳೆಯುವ ವ್ಯವಸ್ಥೆ ಮಾಡಲಾಗಿತ್ತು. ಇದಲ್ಲದೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿತ್ತು. ಇಷ್ಟೆಲ್ಲಾ ಕ್ರಮಗಳನ್ನು ಕೈಗೊಂಡಿದ್ದರೂ ಮತ್ತು ದೀಪಾವಳಿ ಹಬ್ಬವಾಗಿ ತಿಂಗಳು ಉರುಳಿದ್ದರೂ ದೆಹಲಿಯ ವಾಯು ಮಾಲಿನ್ಯ ನಿಯಂತ್ರಣ ಬಾರದೇ ಇರುವುದು ಸಹಜವಾಗಿ ಜನರಲ್ಲಿ ಆತಂಕವನ್ನು ಉಂಟುಮಾಡಿದೆ.

ನವದೆಹಲಿ( ಡಿ. 12):  ಸಾಮಾನ್ಯವಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೀಪಾವಳಿ ಸಂದರ್ಭದಲ್ಲಿ ವಾಯು ಮಾಲಿನ್ಯ ಬಹಳ ದೊಡ್ಡ ಮಟ್ಟದಲ್ಲಿ ಜಾಸ್ತಿಯಾಗುತ್ತದೆ. ಹಾಗೆ ದಿನ ಕಳೆದಂತೆ ಅದು  ಕಡಿಮೆ ಕೂಡ ಆಗುತ್ತದೆ. ಆದರೆ ಈ ಬಾರಿ ದೀಪಾವಳಿ ಹಬ್ಬವಾಗಿ ತಿಂಗಳು ಕಳೆದರೂ ವಾಯು ಮಾಲಿನ್ಯ ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿರುವ ಮಾಹಿತಿ ಪ್ರಕಾರ ಸರಾಸರಿ 24 ಗಂಟೆಗಳ ವಾಯು ಗುಣಮಟ್ಟದ ಸೂಚ್ಯಂಕ ಶನಿವಾರ ಬೆಳಿಗ್ಗೆ  ದೆಹಲಿಯ ವಿವಿಧ ಪ್ರದೇಶಗಳಲ್ಲಿ ಈ ರೀತಿ ಇದೆ. ದೆಹಲಿ ವಿಶ್ವ ವಿದ್ಯಾಲಯ ಪ್ರದೇಶದಲ್ಲಿ 397. ನೋಯ್ಡಾ ಸುತ್ತಾ ಮುತ್ತಾ 361. ಪೂಸಾ ಪ್ರದೇಶದ ವ್ಯಾಪ್ತಿಯಲ್ಲಿ 353. ದೆಹಲಿ ಐಐಟಿ ಪ್ರದೇಶಗಳಲ್ಲಿ 369.

ಗಾಳಿಯ ಗುಣಮಟ್ಟವು 300 ಅಂಕದ ಮೇಲಿದ್ದರೆ ಅದನ್ನು ‘ಅತ್ಯಂತ ಕಳಪೆ’ ಎಂದು ವ್ಯಾಖ್ಯಾನಿಸಲಾಗುತ್ತದೆ. ಅಲ್ಲದೆ ಅಂತಹ ಗಾಳಿಯನ್ನು ‘ಉಸಿರಾಡಲು ಅನರ್ಹ’ ಎಂದು ಕೂಡ ಹೇಳಲಾಗುತ್ತದೆ.  ಹಾಗಾಗಿಯೇ ಶನಿವಾರ ದೆಹಲಿಯಲ್ಲಿ ಸರಾಸರಿ ಏರ್ ಕ್ವಾಲಿಟಿ ಇಂಡೆಕ್ಸ್ 303 ಆಗಿರುವುದರಿಂದ ರಾಷ್ಟ್ರ ರಾಜಧಾನಿಯ ಜನ ಆತಂಕಕ್ಕೆ ಈಡಾಗಿದ್ದಾರೆ.

ದೀಪಾವಳಿ ಹಬ್ಬದ ಸಂದರ್ಭದಲ್ಲಿ ದೆಹಲಿಯ ಸುತ್ತ ಇರುವ ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಗೋಧಿ ಬೆಳೆಯ ತ್ಯಾಜ್ಯವನ್ನು ಸುಡಲಾಗುತ್ತದೆ. ಹಿಂದಿನಿಂದಲೂ ಇದು ನಡೆದುಕೊಂಡು ಬಂದಿದೆ. ಅಲ್ಲಿ ತ್ಯಾಜ್ಯ ಸುಟ್ಟಾಗ ಹೊಮ್ಮುವ ಹೊಗೆ ದೆಹಲಿಯ ಕಡೆಗೆ ಬರಲಿದೆ.‌ ತ್ಯಾಜ್ಯ ಸುಡುವುದನ್ನು ತಪ್ಪಿಸಲು ಈವರೆಗೆ ಯಾವುದೇ ವೈಜ್ಞಾನಿಕ ಕ್ರಮ ಕೈಗೊಂಡಿಲ್ಲ. ರೈತರಿಗೆ ಪರ್ಯಾಯ ಮಾರ್ಗವನ್ನು ಹೇಳಿಕೊಟ್ಟಿಲ್ಲ.‌ ಪರಿಹಾರದ ವ್ಯವಸ್ಥೆಯನ್ನೂ ಮಾಡಿಕೊಟ್ಟಿಲ್ಲ.


ಇದಲ್ಲದೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಭಾರೀ ಪ್ರಮಾಣದಲ್ಲಿ ಪಟಾಕಿ ಸಿಡಿಸಲಾಗುತ್ತದೆ. ಜೊತೆಗೆ ಈ ಸಂದರ್ಭದಲ್ಲಿ ಸಾಮಾನ್ಯವಾಗಿ ಗಾಳಿಯ ವೇಗ ಕೂಡ ಕಡಿಮೆ ಇರುತ್ತದೆ. ಈ  ಎಲ್ಲಾ ಕಾರಣಗಳಿಂದ ದೆಹಲಿಯಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಾಯುಮಾಲಿನ್ಯ ಹೆಚ್ಚಾಗುವುದು ಸರ್ವೇ ಸಾಮಾನ್ಯ.

ಆದರೆ ಈ ಬಾರಿ ದೆಹಲಿಯಲ್ಲಿ ಬೆಳೆ ತ್ಯಾಜ್ಯ ಸುಡುವುದನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಲಾಗಿತ್ತು. ಅದಕ್ಕೆ ಬದಲಾಗಿ ತಾಜ್ಯದ ಮೇಲೆ ಕೆಮಿಕಲ್ ಸಿಂಪಡಿಸಿ ಅಲ್ಲೇ ಕೊಳೆಯುವ ವ್ಯವಸ್ಥೆ ಮಾಡಲಾಗಿತ್ತು. ಇದಲ್ಲದೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿತ್ತು. ಇಷ್ಟೆಲ್ಲಾ ಕ್ರಮಗಳನ್ನು ಕೈಗೊಂಡಿದ್ದರೂ ಮತ್ತು ದೀಪಾವಳಿ ಹಬ್ಬವಾಗಿ ತಿಂಗಳು ಉರುಳಿದ್ದರೂ ದೆಹಲಿಯ ವಾಯು ಮಾಲಿನ್ಯ ನಿಯಂತ್ರಣ ಬಾರದೇ ಇರುವುದು ಸಹಜವಾಗಿ ಜನರಲ್ಲಿ ಆತಂಕವನ್ನು ಉಂಟುಮಾಡಿದೆ.

ಕೇಂದ್ರ ಸರ್ಕಾರ ಇತ್ತೀಚೆಗೆ ತಂದಿರುವ ಹೊಸ ಕಾನೂನಿನ ಪ್ರಕಾರ ಗಾಳಿಯನ್ನು ಮಲಿನಗೊಳಿಸುವ ಯಾವುದೇ ಚಟುವಟಿಕೆಗಳನ್ನು ಅಪರಾಧ ಎಂದು ಪರಿಗಣಿಸಲಾಗುತ್ತದೆ. ಈ ಕಾನೂನನ್ನು ಉಲ್ಲಂಘಿಸಿದವರಿಗೆ ದಂಡ ಹಾಗೂ ಶಿಕ್ಷೆಯನ್ನು ವಿಧಿಸಲಾಗುತ್ತದೆ. ಆದರೆ ಇವೆಲ್ಲವೂ ಕಾಗದದ ಮೇಲೆ ಇವೆಯೇ ಹೊರತು ವಾಸ್ತವವಾಗಿ ಅನುಷ್ಠಾನಕ್ಕೆ ಬಂದಿಲ್ಲ ಎಂಬುದು ದೆಹಲಿಯ ವಾಯು ಮಾಲಿನ್ಯ ಹೆಚ್ಚುತ್ತಿರುವುದರಿಂದ ಸ್ಪಷ್ಟವಾಗುತ್ತದೆ

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *