ಕ್ರಿಕೆಟ್ ಅಂಗಳಕ್ಕೆ ಎಂಟ್ರಿ ಕೊಡೋಕೆ ರೆಡಿಯಾಗಿದ್ದಾರೆ ಸ್ಟಾರ್ ಬ್ಯಾಟ್ಸ್ಮ್ಯಾನ್ ಪುತ್ರ..!
ಭಾರತ ಕ್ರಿಕೆಟ್ ದೇವರು ಎಂದೇ ಖ್ಯಾತರಾಗಿ, ದೇಶದ ಪರವಾಗಿ ಅಡಿ, ಭಾರತ ದೇಶದ ಮಾಸ್ಟರ್ ಬ್ಲಾಸ್ಟರ್ ಎಂದೇ ಗುರುತಿಸಿಕೊಂಡಿರುವ ಸಚಿನ್ ತೆಂಡುಲ್ಕರ್ ಅವರ ಮನೆಯ ಮತ್ತೊಂದು ಕುಡಿ ಈಗ ಸದ್ದಿಲ್ಲದೇ ಸೀನಿಯರ್ ಕ್ರಿಕೆಟ್ ತಂಡಕ್ಕೆ ಎಂಟ್ರಿಯಾಗಿದ್ದಾರೆ. ಹಾಗಾದ್ರೆ ಆ ಆಟಗಾರ ಯಾರು? ಯಾವ ತಂಡಕ್ಕೆ ಆಯ್ಕೆಯಾಗಿದ್ದಾರೆ? ಈ ಎಲ್ಲಾ ವಿಚಾರಗಳ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ.
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಮುಂಬೈ ಸೀನಿಯರ್ ತಂಡಕ್ಕೆ ಆಯ್ಕೆಯಾಗಿದ್ದಾರೆ..
ಮುಂಬರುವ ಸೈಯದ್ ಮುಷ್ತಾಕ್ ಅಲಿ ಟೂರ್ನಿಗೆ ಅರ್ಜುನ್ ತೆಂಡುಲ್ಕರ್ ಆಯ್ಕೆಯಾಗಿದ್ದಾರೆ ಇನ್ನೂ ಇಬ್ಬರು ಆಟಗಾರರನ್ನ ಹೆಚ್ಚುವರಿ ಆಯ್ಕೆ ಮಾಡುವಂತೆ ಬಿಸಿಸಿಐ ಸೂಚಿಸಿತ್ತು. ಹೀಗಾಗಿ ಬಿಸಿಸಿಐ ಸೂಚನೆ ಮೇರೆಗೆ ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್ಗೆ ಸೈಯದ್ ಮುಷ್ತಾಕ್ ಅಲಿ ಸರಣಿಗೆ ಆಯ್ಕೆ ಮಾಡಲಾಗಿದೆ.
ಒಟ್ಟಿನಲ್ಲಿ ಕ್ರಿಕೆಟ್ನಲ್ಲಿ ಮಿಂಚುತ್ತಿರುವ ಸಚಿನ್ ಪುತ್ರ, ತಂದೆಯಂತೆಯೇ ಮಿಂಚುತ್ತಾರಾ..? ಟೀಂ ಇಂಡಿಯಾ ಪರ ಆಡಲಿದ್ದಾರಾ ಈ ಎಲ್ಲಾ ಪ್ರಶ್ನೆಗಳಿಗೆ ಕೆಲವೇ ದಿನಗಳಲ್ಲಿ ಉತ್ತರ ಸಿಗಬಹುದು..!