3ನೇ ಟೆಸ್ಟ್: ದಿಢೀರ್ ವಿಕೆಟ್ ಪತನದ ಬಳಿಕ ಚೇತರಿಸಿಕೊಂಡ ಭಾರತಕ್ಕೆ ಪೂಜಾರಾ ಆಸರೆ

ಸಿಡ್ನಿ: ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 3ನೇ ಟೆಸ್ಟ್ ನ ಮೂರನೇ ದಿನಾದಟದಲ್ಲಿ ಭಾರತ ತಂಡ ದಿಢೀರ್ 2 ವಿಕೆಟ್  ಕಳೆದುಕೊಂಡಿತು. ಆದರೆ ಕ್ರೀಸ್ ಗೆ ಬಂದ ಪೂಜಾರ ಭಾರತ ತಂಡಕ್ಕೆ ಆಸರೆಯಾಗಿ ನಿಂತಿದ್ದಾರೆ.

3ನೇ ದಿನದಾಟದ ಭೋಜನ ವಿರಾಮದ ಹೊತ್ತಿಗೆ ಭಾರತ ತಂಡ 79 ಓವರ್‌ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 180 ರನ್ ಗಳಿಸಿದ್ದು, ಇನ್ನಿಂಗ್ಸ್ ಮುನ್ನಡೆಗಾಗಿ ಇನ್ನು 158 ರನ್ ಗಳಿಸಬೇಕಿದೆ.  ಪ್ರಸ್ತುತ 42 ರನ್ ಗಳಿಸಿರುವ ಚೇತೇಶ್ವರ ಪೂಜಾರ ಮತ್ತು 29 ರನ್ ಗಳಿಸಿರುವ ರಿಷಬ್ ಪಂತ್ ಕ್ರೀಸ್ ಕಾಯ್ದುಕೊಂಡಿದ್ದಾರೆ.

ನಿನ್ನೆ 2ನೇ ದಿನದಾಟದ ಅಂತ್ಯಕ್ಕೆ ಭಾರತತಂಡ 2 ವಿಕೆಟ್ ಗೆ  96 ರನ್ ಗಳಿಸಿತ್ತು. ಪೂಜಾರ ಮತ್ತು ರಹಾನೆ 3ನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದರು. ಆದರೆ ಇಂದು 22 ರನ್ ಗಳಿಸಿದ್ದ ರಹಾನೆ ಅವರನ್ನು ಪ್ಯಾಟ್ ಕಮಿನ್ಸ್ ಬೋಲ್ಡ್ ಮಾಡಿ ಔಟ್ ಮಾಡಿದರು. ಇದರ ಬೆನ್ನಲ್ಲೇ ಹುನಮವಿಹಾರಿ ಇನ್ನಿಲ್ಲದ ರನ್ ಕದಿಯಲು ಹೋಗಿ ರನೌಟ್ ಆದರು. ಈ ಎರಡು ವಿಕೆಟ್ ಗಳು ಭಾರತ ತಂಡದ ಹಿನ್ನಡೆಗೆ ಕಾರಣವಾಯಿತು. ಆದರೆ ಪಂತ್ ಜೊತೆಗೂಡಿದ ಪೂಜಾರ ತಂಡಕ್ಕೆ ಯಾವುದೇ ಅಪಾಯವಾಗದಂತೆ ನೋಡಿಕೊಂಡರು.

144 ಎಸೆತಗಳನ್ನು ಎದುರಿಸಿರುವ ಪೂಜಾರ ನಾಲ್ಕು ಬೌಂಡರಿಗಳ ನೆರವಿನಿಂದ 42 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಇವರಿಗೆ ಸಾಥ್ ನೀಡುತ್ತಿರುವ ರಿಷಭ್ ಪಂತ್ 29 ರನ್ ಗಳಿಸಿ ಕ್ರೀಸಿನಲ್ಲಿದ್ದಾರೆ. ಆಸೀಸ್ ಪರ ಪ್ಯಾಟ್ ಕಮಿನ್ಸ್ ಎರಡು ಮತ್ತು ಜೋಶ್ ಹೇಜಲ್‌ವುಡ್ ಒಂದು ವಿಕೆಟ್ ಪಡೆದಿದ್ದಾರೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *