ಗೋಹತ್ಯೆ ನಿಷೇಧದಡಿ ಬಿತ್ತು ಮೊದಲ ಕೇಸ್…! ಚಿಕ್ಕಮಗಳೂರಿನಲ್ಲಿ ದಾಖಲಾಯ್ತು ಮೊದಲ ಪ್ರಕರಣ…!

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆ ರಾಜ್ಯದಲ್ಲಿ ಸುಗ್ರೀವಾಜ್ಞೆ ಮೂಲಕ ಜಾರಿಗೆ ಬಂದ  ಗೋಹತ್ಯೆ ನಿಷೇಧ ಕಾಯ್ದೆಯಡಿ ಇದೇ ಮೊದಲ ಪ್ರಕರಣ ಚಿಕ್ಕಮಗಳೂರಲ್ಲಿ ಮೊದಲ ಕೇಸ್​ ದಾಖಲಾಗಿದೆ.


ಹಾವೇರಿಯಿಂದ ಶೃಂಗೇರಿ ಮೂಲಕ ಮಂಗಳೂರಿಗೆ ಅಕ್ರಮವಾಗಿ 2 ಕಂಟೇನರ್​​ನಲ್ಲಿ 34 ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಶೃಂಗೇರಿಯ ತನಿಕೋಡು ಚೆಕ್​ಪೋಸ್ಟ್​ ಬಳಿ ಯುವಕರ ಗುಂಪು ತಡೆದಿದೆ. ಈ ವೇಳೆ ಒಬ್ಬ ಚಾಲಕ ಪರಾರಿಯಾಗಿದ್ದು ಮತ್ತೊಬ್ಬ ಚಾಲಕನ ಮೇಲೆ ಯುವಕರು ಹಲ್ಲೆ ನಡೆಸಿದ್ದಾರೆ.

ಶೃಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕಂಟೇನರ್ ಸಮೇತ ಜಾನುವಾರು ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪರಾರಿಯಾಗಿರೋ ಮತ್ತೊಬ್ಬ ಚಾಲಕನಿಗೆ ಪೊಲೀಸರ ಶೋಧಕಾರ್ಯ ನಡೆಯುತ್ತಿದೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *