ಜನರ ಸಮಸ್ಯೆಗಳಿಗೆ ಅನುಗುಣವಾಗಿ ಕಾರ್ಯಕ್ರಮ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಹುಬ್ಬಳ್ಳಿ: ಪ್ರತಿ ಕ್ಷೇತ್ರದಲ್ಲಿ ಜನರ ಸಮಸ್ಯೆಗಳು,ಅವರ ಅಭಿಪ್ರಾಯ ಏನು ಎಂಬುದು ತಿಳಿದು, ನಂತರ ಅದಕ್ಕನುಗುಣವಾಗಿ ಹೋರಾಟ ಹಾಗೂ ಪಕ್ಷ ಸಂಘಟನೆ ಕೆಲಸ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿರುವ ಸಮಸ್ಯೆಗಳೇನು? ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಏನೇನು ಸಮಸ್ಯೆಗಳಿವೆ? ಜನರ ಧ್ವನಿ ಹಾ ಗೂ ಅಭಿಪ್ರಾಯ ಏನು ಎಂಬುದನ್ನು ತಿಳಿಯಲು ಬ್ಲಾಕ್, ಜಿಲ್ಲಾ ಮಟ್ಟದ ಅಧ್ಯಕ್ಷರು ಹಾಗೂ ವಿವಿಧ ಘಟಕಗಳ ಅಧ್ಯಕ್ಷರುಗಳನ್ನು ಕರೆದು ಚರ್ಚೆ ಮಾಡುತ್ತಿದ್ದೇವೆ. ಅವರ ಅಭಿಪ್ರಾಯಗಳನ್ನು ಆಲಿಸಿದ ನಂತರ, ಪ್ರತಿ ಕ್ಷೇತ್ರದಲ್ಲೂ ಪ್ರತ್ಯೇಕ ಹೋರಾಟ ನಡೆಸುತ್ತೇವೆ. ಈ ವರ್ಷವನ್ನು ಹೋರಾಟದ ವರ್ಷ, ಸಂಘಟನೆ ವರ್ಷ ಎಂದು ಘೋಷಿಸಿದ್ದೇವೆ ಎಂದು ತಿಳಿಸಿದರು.

ಇದೇ ವೇಳೆ ಯುವ ಕಾಂಗ್ರೆಸ್ ಕರ್ನಾಟಕ ಘಟಕದ ರಾಜ್ಯಾಧ್ಯಕ್ಷಕ ಆಯ್ಕೆ ಚುನಾವಣೆ ಕುರಿತು ಮಾತನಾಡಿದ ಅವರು, ಯುವ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ಪಾರದರ್ಶಕವಾಗಿ ನಡೆಯಬೇಕು. ಪಕ್ಷ ಸಂಘಟನೆ ಮಾಡುವ ಉತ್ತಮ ನಾಯಕನ ಆಯ್ಕೆಯಾಗಬೇಕು. ಹೀಗಾಗಿ ಈ ಚುನಾವಣೆಯಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದ್ದಾರೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *