ಠಾಕ್ರೆ ಅವರೇ ಅಧಿಕಪ್ರಸಂಗತನದ ಹೇಳಿಕೆ ಬೇಡ, ಕೆಣಕಲು‌ ಬರಬೇಡಿ: ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್

ಬೆಂಗಳೂರು:ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು, ಮರಾಠಿ ಮಾತನಾಡುವ ಪ್ರದೇಶವನ್ನು ಕರ್ನಾಟಕ ಆಕ್ರಮಿತ ಪ್ರದೇಶವಾಗಿ ಘೋಷಿಸುತ್ತೇವೆ ಎಂದು ಹೇಳುವ ಮೂಲಕ ವಿವಾದ ಹುಟ್ಟುಹಾಕಿದ ಮಹಾರಾಷ್ಟ್ರ ಸಿಎಂ ಉದ್ಧವ್‌ ಠಾಕ್ರೆಗೆ, ಮಾಜಿ ಸಿಎಂ ಸಿದ್ದರಾಮಯ್ಯ ಸರಿಯಾಗೇ ಟಾಂಗ್‌ ಕೊಟ್ಟಿದ್ದಾರೆ.

ನಮ್ಮ ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಠಾಕ್ರೆ ನೀಡಿರುವ ಅಧಿಕಪ್ರಸಂಗತನದ ಹೇಳಿಕೆ ಖಂಡನೀಯ. ಬೆಳಗಾವಿ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಲು‌ ಬರಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಟ್ವಿಟ್ಟರ್‌ನಲ್ಲಿ #ಬೆಳಗಾವಿನಮ್ಮದು ಎಂಬ ಹ್ಯಾಷ್‌ಟ್ಯಾಗ್‌ ಮೂಲಕ ಟ್ವೀಟ್‌ ಮಾಡಿದ ಸಿದ್ದರಾಮಯ್ಯ, ಬೆಳಗಾವಿ ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ.

ಉದ್ಧವ್‌ ಅವರೇ, ಇತ್ಯರ್ಥವಾಗಿರುವ ವಿಷಯವನ್ನುವ ಕೆಣಕಿ ರಾಜಕೀಯ ಮಾಡಲು ಹೋಗಬೇಡಿ. ಈಗ ನೀವು ಕೇವಲ ಶಿವಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಎನ್ನುವುದನ್ನು ಮರೆಯಬೇಡಿ ಎಂದು ಕಿವಿಮಾತು ಹೇಳಿದ್ದಾರೆ. ಕರ್ನಾಟಕದ ನೆಲ-ಜಲ-ಭಾಷೆಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ.

ಈ ಬಗ್ಗೆ ರಾಜಿಯೂ ಇಲ್ಲ, ರಾಜಕೀಯವೂ ಇಲ್ಲ. ಮಹಾರಾಷ್ಟ್ರ ಮುಖ್ಯಮಂತ್ರಿಯವರ ಅವರ ಉದ್ಧಟತನದ ಹೇಳಿಕೆಗೆ ಸಿಎಂ ಬಿಎಸ್‌ವೈ ಅವರು ಅಧಿಕೃತವಾಗಿ ತಕ್ಕ ಪ್ರತ್ಯುತ್ತರ ನೀಡಬೇಕು ಎಂದು ಇದೇ ವೇಳೆ ಸಿದ್ದರಾಮಯ್ಯ ಆಗ್ರಹಿಸಿದರು. ಮಹಾರಾಷ್ಟ್ರ ಮುಖ್ಯಮಂತ್ರಿ ಅವರೇ, ಕನ್ನಡಿಗರು ಶಾಂತಿಪ್ರಿಯರು, ಸಹನಶೀಲರು, ಸಹಬಾಳ್ವೆಯಲ್ಲಿ ನಂಬಿಕೆ ಇಟ್ಟವರು.ನಮ್ಮ ಸಜ್ಜನಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ ಎಂದು ಸಿದ್ದರಾಮಯ್ಯ ಠಾಕ್ರೆಗೆ ಟಾಂಗ್‌ ಕೊಟ್ಟಿದ್ದಾರೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *