ಸಾಹುಕಾರ್ ಸಿಡಿ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ …! ಕೇಸ್ ವಾಪಸ್ ಪಡೆದ ದಿನೇಶ್ ಕಲ್ಲಹಳ್ಳಿ..!!
ರಮೇಶ್ ಜಾರಕಿಹೊಳಿ ಸಿಡಿ ಕೇಸ್ಗೆ ಸಂಬಂಧಿಸಿದಂತೆ ನೀಡಿದ್ದ ದೂರನ್ನು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಇಂದು ಕೇಸ್ ವಾಪಸ್ ಪಡೆದಿದ್ದಾರೆ.
ರಮೇಶ್ ಜಾರಕಿಹೊಳಿ ವಿರುದ್ಧ ದಾಖಲಾಗಿದ್ದ ದೂರಿನ ಕೇಸ್ ಬಹುದೊಡ್ಡ ಟ್ವಿಸ್ಟ್ ಪಡೆದುಕೊಂಡಿದೆ. ಮಾರ್ಚ್ 2 ರಂದು ಕಬ್ಬನ್ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ದಿನೇಶ್ ಕಲ್ಲಹಳ್ಳಿ ಇಂದು ದೂರನ್ನು ಹಿಂಪಡೆಯುವುದಾಗಿ ಪತ್ರ ಬರೆದಿದ್ದಾರೆ.