ಜೆಡಿಎಸ್ ಬಿತ್ತಿದ ಬೀಜ ಕಾಂಗ್ರೆಸ್ ಪಕ್ಷದಲ್ಲಿ ಬೆಳೆಯುತ್ತಿದೆ! ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವ್ಯಂಗ್ಯ ಟೀಕೆ
ಹೈಲೈಟ್ಸ್:
- ಜೆಡಿಎಸ್ ಬಿತ್ತಿದ ಬೀಜ ಕಾಂಗ್ರೆಸ್ ಪಕ್ಷದಲ್ಲಿ ಬೆಳೆಯುತ್ತಿದೆ!
- ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವ್ಯಂಗ್ಯ ಟೀಕೆ
- ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ತೀವ್ರಗೊಂಡ ಟ್ವೀಟ್ ಸಮರ
ಬೆಂಗಳೂರು: ಜೆಡಿಎಸ್ ಬಿತ್ತಿದ ಬೀಜ ಕಾಂಗ್ರೆಸ್ ಪಕ್ಷದಲ್ಲಿ ಬೆಳೆಯುತ್ತಿದೆ ಎಂದು ಬಿಜೆಪಿ ಪರೋಕ್ಷವಾಗಿ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ರಾಜಕೀಯ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಟ್ವೀಟ್ ಸಮರ ನಡೆಯುತ್ತಿದ್ದು ಪರಸ್ಪರ ಆರೋಪ ಪ್ರತ್ಯಾರೋಪ ಜೋರಾಗಿದೆ.
ಬಿಜೆಪಿ ನಡೆಸುತ್ತಿರುವಬಿಎಸ್ವೈ ಮುಕ್ತ ಬಿಜೆಪಿ ಅಭಿಯಾನದ ಮುಖವಾಣಿಬಸನಗೌಡ ಪಾಟೀಳ್ ಯತ್ನಾಳ್, ಹಾಗಾದರೆ ಯತ್ನಾಳ್ ವಿರುದ್ಧ ಕ್ರಮ ಯಾಕೆ ಜರಗಿಸುತ್ತಿಲ್ಲ, ಕೇವಲ ನೋಟಿಸ್ ಮಾತ್ರ ಸಾಕೇ? ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಅವರು ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳದೆ ಮಜಾ ಅನುಭವಿಸುತ್ತ ನೋಡಿಕೊಂಡಿರುವುದೇ ಇದಕ್ಕೆ ಸಾಕ್ಷಿ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ತರಾಟೆಗೆ ತೆಗೆದುಕೊಂಡಿತ್ತು.
ಇದರ ಬೆನ್ನಲೇ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಬಿಜೆಪಿ ಟ್ವೀಟ್ ಮಾಡಿದೆ. ಜೆಡಿಎಸ್ ಬಿತ್ತಿದ ಬೀಜ ಕಾಂಗ್ರೆಸ್ ಪಕ್ಷದಲ್ಲಿ ಬೆಳೆಯುತ್ತಿದೆ! ಆದರೆ ಇದು ಬೆಳೆ ಅಲ್ಲ, ಕಳೆ ಎಂದುಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಈಗ ಅರಿವಾಗುತ್ತಿದೆ. ಈ ಕಳೆ ಎಂಬ ಸಿದ್ದರಾಮಯ್ಯ ಅವರನ್ನು ಬೇರು ಸಮೇತ ಕಿತ್ತು ಹಾಕಲು ಮೂಲ ಕಾಂಗ್ರೆಸ್ಸಿಗರು ಪಣ ತೊಟ್ಟಿದ್ದಾರೆ ಎಂದು ಲೇವಡಿ ಮಾಡಿದೆ.