ಕಲಬುರಗಿ  : ಶಹಾಬಾದ್‍ದಲ್ಲಿ ಜಾಗೃತಿ ರಥಕ್ಕೆ ಚಾಲನೆ

ಕಲಬುರಗಿ  : ಶಹಾಬಾದ ತಾಲೂಕಾಡಳಿತ ಹಾಗೂ ಕಲಬುರಗಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಸಂಯುಕ್ತಾಶ್ರಯದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ನೇಮಕಾತಿ ವಿರುದ್ಧ ಜಾಗೃತಿ ರಥಕ್ಕೆ ಶಹಾಬಾದ ತಹಶೀಲ್ದಾರರ ಕಚೇರಿ ಆವರಣದಲ್ಲಿ ತಹಶೀಲ್ದಾರರು ಹಾಗೂ ತಾಲೂಕು ದಂಡಾಧಿಕಾರಿಗಳಾದ ಸುರೇಶ ವರ್ಮಾ ಅವರು ಸೋಮವಾರ ಚಾಲನೆ ನೀಡಿದರು.
ನಂತರ ಅವರು ಮಾತನಾಡಿ, 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಕೆಲಸಕ್ಕೆ ನೇಮಿಸಿಕೊಳ್ಳುವುದು ಹಾಗೂ 18 ವರ್ಷದೊಳಗಿನ ಕಿಶೋರಾವಸ್ಥೆ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಮಕ್ಕಳನ್ನು ನೇಮಿಸಿಕೊಂಡ ಮಾಲೀಕರಿಗೆ 50,000 ರೂ.ಗಳ ವರೆಗೆ ದಂಡ ಅಥವಾ ಎರಡು ವರ್ಷಗಳ ಸೆರೆಮನೆ ವಾಸದ ಶಿಕ್ಷೆಗೆ ಒಳಪಡಸಲಾಗುತ್ತದೆ. ಇದಲ್ಲದೇ ತಪ್ಪಿತಸ್ಥ ಮಾಲೀಕರ ವಿರುದ್ಧ ಎಫ್.ಐ.ಆರ್. ಸಹ ದಾಖಲಿಸುವುದರ ಜೊತೆಗೆ ಕೆಲಸಕ್ಕೆ ಸೇರಿಸಿದ ಪಾಲಕರ ಮೇಲೆಯೂ ಮೊಕದ್ದಮೆ ದಾಖಲಿಸಲಾಗುತ್ತದೆ ಎಂದರು.
ಪ್ರತಿ ತಿಂಗಳು ಪತ್ತೆದಾಳಿ ನಡೆಸಿ ಬಾಲಕಾರ್ಮಿಕರನ್ನು ರಕ್ಷಿಸಿ, ತಪ್ಪಿತಸ್ಥ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಬೇಕು. ಯಾರೂ ಬಾಲಕಾರ್ಮಿಕರನ್ನು ನೇಮಿಸಿಕೊಳ್ಳಬಾರದೆಂದು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅವಶ್ಯಕವಾಗಿದೆ ಎಂದರು.
ಉಪತಹಶೀಲ್ದಾರ ವೀರಣ್ಣಗೌಡ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಗಿರೀಶ ರಂಜೋಳಕರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಸ್.ಎಂ. ಪಾಟೀಲ್, ಕಲಬುರಗಿ ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ, ಸೋಮಶೇಖರ ವಿ.ಜೆ., ರಾಮಚಂದ್ರ ರಾಠೋಡ್, ಬಸವರಾಜ ಟೆಂಗಳಿ, ಸುಂದರ, ಶ್ರೀಶೈಲ್ ಬಿರಾದಾರ್ ಹಾಗೂ ಶಹಾಬಾದ ಶಿಶು ಅಭಿವೃದ್ಧಿ ಯೋಜನೆ ಮೇಲ್ವಿಚಾರಕ ಹಾಗೂ ಮಕ್ಕಳ ಸಹಾಯವಾಣಿ ಸಿಬ್ಬಂದಿ ಉಪಸ್ಥಿತರಿದ್ದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *