ಅಶ್ಲೀಲ ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ಮೊಬೈಲ್ ವಶಕ್ಕೆ ಪಡೆದ ಎಸ್​ಐಟಿ

ಹೈಲೈಟ್ಸ್‌:

  • ಭಾರೀ ಸದ್ದು ಮಾಡಿದ್ದ ಅಶ್ಲೀಲ ಸಿಡಿ ಪ್ರಕರಣ ಹೊಸ ಟ್ವಿಸ್ಟ್‌
  • ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಮೊಬೈಲ್‌ ಪಡೆದ ಎಸ್‌ಐಟಿ
  • ಯುವತಿ ಜೊತೆ ಸಂಪರ್ಕವಿರುವ ಆರೋಪ ಹಿನ್ನೆಲೆ ವಶಕ್ಕೆ

ಬೆಂಗಳೂರು: ಸಿ.ಡಿ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರ ಮೊಬೈಲ್ ‌ಫೋನ್‌ ಅನ್ನು ಪರಿಶೀಲನೆಗಾಗಿ ವಿಶೇಷ ತನಿಖಾ ದಳ ವಶಕ್ಕೆ ಪಡೆದಿದೆ ಎಂದು ತಿಳಿದು ಬಂದಿದೆ. ನಾಪತ್ತೆಯಾಗಿರುವ ಯುವತಿ ಮತ್ತು ಮಾಜಿ ಸಚಿವರು ಫೋನ್‌ ಸಂಪರ್ಕದಲ್ಲಿದ್ದರು. ವಾಟ್ಸ್‌ಆ್ಯಪ್‌ ಮತ್ತು ವಿಡಿಯೊ ಕಾಲ್‌ ಮಾಡುತ್ತಿದ್ದರು ಎಂಬ ಅನುಮಾನ ಇದೆ.

ರಮೇಶ್ ಜಾರಕಿಹೊಳಿ ತಮಗೂ ಈ ಸಿಡಿಗೂ ಸಂಬಂಧ ಇಲ್ಲ. ಇದು ಎಡಿಟ್ ಮಾಡಿದ ವಿಡಿಯೋ ಎಂದು ದೂರಿದ್ದರು. ಅಲ್ಲದೆ, ಈ ಬಗ್ಗೆ ತನಿಖೆ ನಡೆಸಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಬಳಿ ಮನವಿ ಮಾಡಿದ್ದರು. ಈ ಬಗ್ಗೆ ಮಾತನಾಡಿದ್ದ ಬಸವರಾಜ ಬೊಮ್ಮಾಯಿ, ‘ಸಚಿವ ರಮೇಶ್ ಜಾರಕಿಹೊಳಿ ಅವರ ವಿನಂತಿ ಮೇರೆಗೆ ತನಿಖೆಗೆ ಆದೇಶಿಸಲಾಗಿದೆ’ ಎಂದಿದ್ದರು.ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಈ ತಂಡ ಈಗ ತನಿಖೆಗೆ ನಡೆಸುತ್ತಿದೆ.

ರಮೇಶ್‌ ಜಾರಕಿಹೊಳಿ ಸೆಕ್ಸ್‌ ಸಿಡಿ ಎಲ್ಲಿ ತಯಾರಾಗಿದೆ, ವೆಬ್ಸೈಟ್ಗಳಿಗೆ ಎಲ್ಲಿಂದ ಅಪ್ಲೋಡ್ ಆಯಿತು ಎಂಬ ಬಗ್ಗೆ ಈ ತನಿಖೆ ಬೆಳಕು ಚೆಲ್ಲಲಿದೆ. ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವರು ತಿಳಿಸಿದ್ದರು.ಈ ಹಿನ್ನೆಲೆಯಲ್ಲಿಪರಿಶೀಲನೆ ನಡೆಸಲು ಫೋನ್‌ ನೀಡುವಂತೆ ಎಸ್‌ಐಟಿ ಕೋರಿತ್ತು. ಜಾರಕಿಹೊಳಿ ಅವರು ಒಪ್ಪಿದ ಕಾರಣ ಬುಧವಾರ ರಾತ್ರಿ ಮೊಬೈಲ್‌ ಫೋನ್‌ ವಶಕ್ಕೆ ಪಡೆಯಲಾಗಿದೆ. ಹೆಚ್ಚಿನ ಪರಿಶೀಲನೆಗಾಗಿ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗುತ್ತದೆ ಎಂದು ತಿಳಿದು ಬಂದಿದೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *