ಸದಾಶಿವನಗರದಲ್ಲಿ ಭಾರೀ ಹೈಡ್ರಾಮಾ…! ಯುವ ಕಾಂಗ್ರೆಸ್​, ಬಿಜೆಪಿಯಿಂದ ಪ್ರೊಟೆಸ್ಟ್​..!

ಮಾಜಿ ಸಚಿವ ರಮೇಶ್ ಜಾರಕಿಹೊಳಿಯದ್ದು ಎನ್ನಲಾದ ಸಿ.ಡಿ ಬಿಡುಗಡೆಯಾದ ಮೇಲೆ ರಾಜ್ಯದಲ್ಲಿ ರಾಜಕೀಯ ಚಟುವಟಿಗೆ ಜೋರಾಗಿದೆ. ಸಿ.ಡಿ ಪ್ರಕರಣವನ್ನು ಸರ್ಕಾರ SIT ತನಿಖೆಗೆ ವಹಿಸಿದ ಬೆನ್ನಲ್ಲೇ ,ಸಿ.ಡಿ ಲೇಡಿ ವಕೀಲ ಜಗದೀಶ್​ ಅವರ ಮೂಲಕ ಕಂಪ್ಲೆಂಟ್ ದಾಖಲಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಗೆಗಳ ನಡುವೆ ಇಂದು ಸಿ.ಡಿ ಲೇಡಿ ಕುಟುಂಬದವರು SIT ಮುಂದೆ ಹಾಜರಾಗಿ ತಮ್ಮ ಹೇಳಿಕೆ ನೀಡಿದ್ದಾರೆ. ಈ ಘಟನೆಗಳ ಹಿಂದೆ ಯಾರಿದ್ದಾರೆ ಎಂದು ಹೇಳಿದ್ದಾರೆ.


ಯುವತಿ ಪೋಷಕರ ಪ್ರೆಸ್​ಮೀಟ್ ಬಳಿಕ ಮಾತನಾಡಿದ ರಮೇಶ್ ಜಾರಕಿಹೊಳಿ , ಡಿ.ಕೆ ಶಿವಕುಮಾರ್​ಗೆ ನೇರ ಸವಾಲ್ ಹಾಕಿದ್ದಾರೆ. ಮಹಾನಾಯಕನ ಹೆಸ್ರು ಯುವತಿ ಪೋಷಕರೇ ಹೇಳಿದ್ದಾರೆ. ಅವ ಎಂತ ದೊಡ್ಡ ಗಂಡಸು.. ಆತ ಗಾಂ…. ಎಂದು ಡಿ.ಕೆ ಶಿವಕುಮಾರ್​ ವಿರುದ್ಧ ತಮ್ಮ ಅಸಮಾಧಾನ ಹೊರ ಹಾಕಿದ್ದರು.


ರಮೇಶ್ ಜಾರಕಿಹೊಳಿ ನಮ್ಮ ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದು, ಅವರ ಹೇಳಿಕೆಯನ್ನು ಈ ಕೂಡಲೇ ಹಿಂಪಡೆಯಬೇಕು ಎಂದು ಯುವ ಕಾಂಗ್ರೆಸ್​ ನಾಯಕ ನಲಪಾಡ್ ಹ್ಯಾರಿಸ್​ ಎಚ್ಚರಿಕೆ ನೀಡಿದ್ರು. ಇನ್ನೊಬ್ಬ ಕಯುವ ಕಾಂಗ್ರೆಸ್ ಮುಖಂಡ ರಕ್ಷಾ ರಾಮಯ್ಯ ಕೂಡಾ ರಮೇಶ್ ಜಾರಕಿಹೊಳಿ ವಿರುದ್ಧ ಕಿಡಿ ಕಾರಿದ್ರು.


ಸದಾಶಿವನಗರದ ರಮೇಶ್ ಜಾರಕಿಹೊಳಿ ನಿವಾಸದ ಬಳಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ರಮೇಶ್ ಜಾರಕಿಹೊಳಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ರಮೇಶ್​ ಜಾರಕಿಹೊಳಿ ನಿವಾಸಕ್ಕೆ ಮುತ್ತಿಗೆ ಹಾಕಲೂ ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ.
ಇನ್ನು ಈ ಪ್ರಕರಣದ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರು ಡಿಕೆಶಿ ಮನೆಗೆ ಮುತ್ತಿಗೆ ಹಾಕಿದ್ದಾರೆ. ಯುವತಿಯ ಪೋಷಕರೂ ಕೂಡಾ ಡಿ.ಕೆ ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದಾರೆ. ಡಿ.ಕೆ. ಶಿವಕುಮಾರ್​ ಸಿ.ಡಿ ಪ್ರಕರಣದ ಮೂಲ ರೂವಾರಿ ಎಂದು ಆರೋಪಿಸಿದ್ದಾರೆ.


ಒಟ್ಟಿನಲ್ಲಿ ಸದಾಶಿವನಗರದಲ್ಲಿ ಇಂದು ಭಾರೀ ಬೆಳವಣಿಗೆಗಳು ನಡೆದಿದೆ. ಸದಾ ಸೈಲೆಂಟಾಗಿರುವ ಸದಾಶಿವನಗರದಲ್ಲಿ ಇಂದು ಪ್ರತಿಭಟನೆಗಳ ಕಾವು ಜೋರಾಗಿದೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *