ರಾಜ್ಯದಲ್ಲಿ ಕೊರೊನಾ ಅಬ್ಬರ: ಮೂರು ಸಾವಿರ ಗಡಿ ದಾಟಿದ ಸೋಂಕಿತರು: 12 ಮಂದಿ ಸಾವು

ಬೆಂಗಳೂರು,- ರಾಜ್ಯದಲ್ಲಿಂದು ಕೊರೊನಾ ಅಬ್ಬರ ಮುಂದುವರಿದಿದೆ ಇಂದು ಸೋಂಕಿತರ ಸಂಖ್ಯೆ ಮೂರು ಸಾವಿರ ಗಡಿ ದಾಟಿದೆ. ಇಂದು ಒಂದೇ ದಿನ 3084 ಮಂದಿಗೆ ಸೋಂಕು ತಗುಲಿದ್ದು,ಇಂದು 12 ಮಂದಿ ಮೃತಪಟ್ಟಿದ್ದಾರೆ.
ಬೆಂಗಳೂರು ನಗರದಲ್ಲಿ ಹೊಸ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು 2004 ಮಂದಿಗೆ ಸೋಙಕು ತಗುಲಿದೆ

ಕೊರೊನಾದಿಂದ ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ 7 ಸೋಂಕಿತ ರು ಮೃತಪಟ್ಟಿದ್ದಾರೆ. ಕಲ್ಬುರ್ಗಿಯಲ್ಲಿ ಒಬ್ಬರು , ಮೈಸೂರಿನಲ್ಲಿ ಇಬ್ಬರು,ತುಮಕೂರು, ಉಡುಪಿಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಏರಿಕೆಯಾಗುತ್ತಿದ್ದು ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 23036ಕ್ಕೆ ಏರಿಕೆಯಾಗಿದೆ.
ಇಂದು1285 ಸೋಂಕಿತರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ983930ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಒಟ್ಟುಕೋವಿಡ್ ಸೊಂಕಿತರು 951452 ಚೇತರಿಸಿಕೊಂಡಿದ್ದಾರೆ. ಸದ್ಯಕ್ಕೆ ರಾಜ್ಯದಲ್ಲಿ ಒಟ್ಟು 23037 ಸಕ್ರಿಯ ಸೋಂಕು ಪ್ರಕರಣಗಳಿವೆ. ಸೋಂಕಿನಿಂದ ಈವರೆಗೆ 12504 ಮಂದಿ ಸಾವಿಗೀಡಾಗಿದ್ದಾರೆ.
ರಾಜ್ಯದಲ್ಲಿ 204 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 2004 ಮಂದಿಗೆ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 426169ಕ್ಕೆ ಏರಿಕೆಯಾಗಿದೆ.
ನಗರದಲ್ಲಿ ಕಳೆದ24ಗಂಟೆಗಳಲ್ಲಿ ಸೊಂಕಿಗೆ 2 ಸೋಂಕಿತರು ಬಲಿಯಾಗಿದ್ದು , ಬೆಂಗಳೂರಿನಲ್ಲಿ ಒಟ್ಟಾರೆ ಸಾವಿನ ಸಂಖ್ಯೆ4574ಕ್ಕೆ ಏರಿಕೆಯಾಗಿದೆ.
ಇಂದು474ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಬೆಂಗಳೂರಿನಲ್ಲಿ ಇದುವರೆಗೂ42-8173 ಸೋಂಕಿತರು ಗುಣಮುಖರಾಗಿದ್ದಾರೆ ಬೆಂಗಳೂರುನಲ್ಲಿ ಒಟ್ಟು15882 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾ ವಾರು ಸೊಂಕಿತರ ವಿವರ

ಬಾಗಲಕೋಟೆ 1, ಬಳ್ಳಾರಿ 53, ಬೆಳಗಾವಿ 36, ಬೆಂಗಳೂರು ಗ್ರಾಮಾಂತರ 46, ಬೀದರ್ 63, ಚಾಮರಾಜನಗರ 9, ಚಿಕ್ಕಬಳ್ಳಾಪುರ 17, ಚಿಕ್ಕಮಗಳೂರು 8, ಚಿತ್ರದುರ್ಗ 12, ದಕ್ಷಿಣ ಕನ್ನಡ 67, ದಾವಣಗೆರೆ 7, ಧಾರವಾಡ 60, ಗದಗ 14, ಹಾಸನ 65, ಹಾವೇರಿ 02, ಕಲಬುರಗಿ 159, ಕೊಡಗು 14, ಕೋಲಾರ 39, ಕೊಪ್ಪಳ 20, ಮಂಡ್ಯ 34, ಮೈಸೂರ 114, ರಾಯಚೂರು 14, ರಾಮನಗರ 3, ಶಿವಮೊಗ್ಗ 33, ತುಮಕೂರು 59, ಉಡುಪಿ115, ಉತ್ತರ ಕನ್ನಡ 11, ವಿಜಯಪುರ 24, ಯಾದಗಿರಿ 9, ಪ್ರಕರಣಗಳು ದಾಖಲಾಗಿವೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *