ರಮೇಶ್ ಜಾರಕಿಹೊಳಿ ಸಿ.ಡಿ ಪ್ರಕರಣ: ಕಾಂಗ್ರೆಸ್ ವರ್ಸಸ್‌ ಬಿಜೆಪಿ ಟ್ವೀಟ್‌ ವಾರ್‌

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿ.ಡಿ ಪ್ರಕರಣದಲ್ಲಿ ಕಾಣಿಸಿಕೊಂಡಿದ್ದ ಸಂತ್ರಸ್ತೆ ಯುವತಿ ನ್ಯಾಯಾಲಯಕ್ಕೆ ಹಾಜರಾದ ಬೆನ್ನಲ್ಲೇ ಕಾಂಗ್ರೆಸ್ ಹಾಗೂ ಬಿಜೆಪಿ ಟ್ವಿಟ್ಟರ್‌ನಲ್ಲಿ ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಳ್ಳುತ್ತಿದೆ.

ರಮೇಶ್ ಜಾರಕಿಹೊಳಿ ಅನಗತ್ಯ ಆರೋಪ ಮಾಡಲಾಗಿದೆ ಎಂಬ ಸಿಎಂ ಬಿಎಸ್‌ ಯಡಿಯೂರಪ್ಪ ಹೇಳಿಕೆಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಹಾಗಿದ್ದರೆ ಕಣ್ಣಿನಲ್ಲಿ ನೋಡಲಾಗದಂತಹ ಸಿಡಿ ಇದೆ ಎಂದು ನಿಮ್ಮ ಬಗೆಗಿನ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಅವರ ಆರೋಪ ನಿಜವೇ? ಅಥವಾ ಸುಳ್ಳೇ? ಎಂದು ಪ್ರಶ್ನಿಸಿದೆ.

ನಿಜವಾಗಿದ್ದರೆ ನೀವೇಕೆ ಇನ್ನೂ ರಾಜೀನಾಮೆ ನೀಡಲಿಲ್ಲ?ಸುಳ್ಳಾಗಿದ್ದರೆ ನೀವೇಕೆ ಇನ್ನೂ ಯತ್ನಾಳ್‌ರನ್ನು ಪಕ್ಷದಿಂದ ಉಚ್ಛಾಟಿಸಲಿಲ್ಲ? ಎಂದು ಕಾಂಗ್ರೆಸ್ ಖಾರವಾಗಿ ಪ್ರಶ್ನಿಸಿದೆ.

ಮತ್ತೊಂದು ಕಡೆಯಲ್ಲಿ ಸಿಡಿ ಪ್ರಕರಣಕಾಂಗ್ರೆಸ್ ಪ್ರಾಯೋಜಿತ ಎಂದು ಎಂದು ಬಿಜೆಪಿ ಟ್ವೀಟ್‌ ಮಾಡಿದೆ. ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಅವರು ಯುವತಿ ಹೇಳಿಕೆ ದಾಖಲು ಮಾಡುವ ಸಂದರ್ಭದಲ್ಲಿ ಹಾಜರಿದ್ದು ಸಹಾಯ ಮಾಡುತ್ತಾರೆ ಎಂದರೆ ಏನರ್ಥ? ಎಂದು ವಿಡಿಯೋವನ್ನು ಉಲ್ಲೇಖ ಮಾಡಿ ಬಿಜೆಪಿ ಪ್ರಶ್ನಿಸಿದೆ. ಕೆಪಿಸಿಸಿ ಕಚೇರಿಯಿಂದಲೇ ಈ ಪ್ರಕರಣ ನಿರ್ವಹಣೆಯಾಗುತ್ತಿದೆ ಎಂಬುದು ನಿಜವೇ? ಎಂದು ತರಾಟೆಗೆ ತೆಗೆದುಕೊಂಡಿದೆ.

ಒಟ್ಟಿನಲ್ಲಿ ಸಿ.ಡಿ ಪ್ರಕರಣದ ಯುವತಿ ನ್ಯಾಯಾಲಯಕ್ಕೆ ಹಾಜರಾದ ಬೆನ್ನಲ್ಲೇ ಟ್ವಿಟ್ಟರ್‌ನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಟಾಕ್‌ ವಾರ್ ತೀವ್ರಗೊಳ್ಳುತ್ತಿದೆ. ಈ ನಡುವೆ ಯುವತಿ ನ್ಯಾಯಾಧೀಶರ ಮುಂದೆ ಸುದೀರ್ಘ ಹೇಳಿಕೆ ನೀಡಿದ್ದು ರಮೇಶ್ ಜಾರಕಿಹೊಳಿ ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ವಿಷಯಗಳನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.

 

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *