CBSE Class 12th Board Exams 2021: ಇಂದು ಕೇಂದ್ರದ ಗ್ರೂಪ್ ಆಫ್ ಮಿನಿಸ್ಟರ್ಸ್ ಸಭೆ: CBSE 2nd PUC ಪರೀಕ್ಷೆ ಬಗ್ಗೆ ನಿರ್ಧಾರ

ನವದೆಹಲಿ(ಮೇ 23): ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಇನ್ನೂ ಪ್ರತಿದಿನ ಸರಿ ಸುಮಾರು ಎರಡೂವರೆ ಲಕ್ಷ ಜನ ಸೋಂಕು ಪೀಡಿತರಾಗುತ್ತಿದ್ದಾರೆ. ಕೊರೋನಾದಿಂದ ಸಾಯುತ್ತಿರುವವರ ಸಂಖ್ಯೆಯಲ್ಲೂ ಇಳಿಮುಖ ಆಗದೆ ಪ್ರತಿ ದಿನ ನಾಲ್ಕು ಸಾವಿರಕ್ಕೂ ಹೆಚ್ಚು ಜನ‌ ಕೊರೋನಾಗೆ ಬಲಿ ಆಗುತ್ತಿದ್ದಾರೆ. ಈ ನಡುವೆ ಕೊರೋನಾ ಲಸಿಕೆ ಕೊರತೆ ಉಂಟಾಗಿದ್ದು ಸಕಾಲಕ್ಕೆ ಎಲ್ಲರಿಗೂ ಲಸಿಕೆ ಸಿಗುವ ಸಾಧ್ಯತೆ ಇಲ್ಲ. ಇದರಿಂದ ಮೂರನೇ ಅಲೆಯ ಅಬ್ಬರವೂ ಕಾಡಬಹುದು. ಈ ಎಲ್ಲಾ ಹಿನ್ನಲೆಯಲ್ಲಿ CBSE ಸೆಕೆಂಡ್ PUC ಪರೀಕ್ಷೆಯನ್ನು ನಡೆಸಬೇಕೋ ಬೇಡವೋ ಎಂಬ ಬಗ್ಗೆ ಇಂದು ನಿರ್ಧಾರ ಆಗಲಿದೆ.

ಕೊರೋನಾ ಹಿನ್ನಲೆಯಲ್ಲಿ CBSE ಸೆಕೆಂಡ್ PUC ಪರೀಕ್ಷೆಯನ್ನು ನಡೆಸಬೇಕೋ ಬೇಡವೋ ಎಂಬ ಬಗ್ಗೆ ಚರ್ಚೆ ಮಾಡಲು ಇಂದು ಕೇಂದ್ರ ಸರ್ಕಾರದ ಗ್ರೂಪ್ ಆಫ್ ಮಿನಿಸ್ಟರ್ಸ್ ಸಭೆ ನಡೆಯಲಿದೆ.‌ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಯಲಿದ್ದು ಇದರಲ್ಲಿ ಕೇಂದ್ರ ಮಾನವ ಸಂಪನ್ಮೂಲ ಸಚಿವ (ಶಿಕ್ಷಣ) ರಮೇಶ್ ಪೋಖ್ರಿಯಾಲ್ ನಿಶಾಂಕ್, ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್, ರಾಜ್ಯಗಳ ಶಿಕ್ಷಣ ಸಚಿವರು ಮತ್ತು ಶಿಕ್ಷಣ ಇಲಾಖೆ ಕಾರ್ಯದರ್ಶಿಗಳು ಭಾಗಿಯಾಗಲಿದ್ದಾರೆ.

ಕೊರೋನಾ ಹಿನ್ನಲೆಯಲ್ಲಿ CBSE ಸೆಕೆಂಡ್ PUC ಪರೀಕ್ಷೆಯನ್ನು ರದ್ದುಪಡಿಸುವಂತೆ ಪೋಷಕರ ವತಿಯಿಂದ ಒತ್ತಾಯಗಳು ಕೇಳಿಬರುತ್ತಿವೆ. ವಿದ್ಯಾರ್ಥಿಗಳ ಜೀವಕ್ಕೆ ಕುತ್ತು ಇರುವುದರಿಂದ ಪರೀಕ್ಷೆ ರದ್ದು ಮಾಡಿ ಎಂಬುದು ಅವರ ಒತ್ತಾಯವಾಗಿದೆ.‌ ಇನ್ನೊಂದೆಡೆ ಖಾಸಗಿ ಶಿಕ್ಷಣ ಸಂಸ್ಥೆಗಳು CBSE ಸೆಕೆಂಡ್ PUC ಪರೀಕ್ಷೆಯನ್ನು ರದ್ದು ಮಾಡುವ ಬದಲಿಗೆ ಮುಂದೂಡುವಂತೆ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ. ಅಂತಿಮವಾಗಿ ಇಂದು ನಡೆಯುವ ಗ್ರೂಪ್ ಆಫ್ ಮಿನಿಸ್ಟರ್ಸ್ ಸಭೆಯಲ್ಲಿ CBSE ಸೆಕೆಂಡ್ PUC ಪರೀಕ್ಷೆಯನ್ನು ನಡೆಸಬೇಕೋ ಬೇಡವೋ ಎಂಬ ಬಗ್ಗೆ ನಿರ್ಧಾರ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

ಶುಕ್ರವಾರ 2,57,299 ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 2,62,89,290ಕ್ಕೆ ಏರಿಕೆ ಆಗಿದೆ.‌ ಆದರೆ ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಮಾತ್ರ ಕಡಿಮೆ ಆಗಿಲ್ಲ. ಶುಕ್ರವಾರ 4,194 ಜನರು ಬಲಿ ಆಗಿದ್ದು ಈವರೆಗೆ ಕೊರೋನಾದಿಂದ ಸತ್ತವರ ಸಂಖ್ಯೆ 2,95,525ಕ್ಕೆ ಏರಿಕೆ ಆಗಿದೆ. ಈವರೆಗೆ 2,30,70,365 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಇನ್ನೂ 29,23,400 ಆಕ್ಟಿವ್ ಕೇಸುಗಳಿವೆ.

ದೇಶದಲ್ಲಿ ಮೊದಲ ಬಾರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು 2020ರ ಜನವರಿ 30ರಂದು; ಕೇರಳದಲ್ಲಿ. ಆಗ ಸೋಂಕು ಪೀಡಿತರ ಸಂಖ್ಯೆ ಲಕ್ಷದ ಗಡಿ ಬಳಿ ಬರಲು ಹೆಚ್ಚು ಕಡಿಮೆ ಎಂಟು ತಿಂಗಳು ಹಿಡಿದವು. ಆಗಲೂ ದಿನ ಒಂದರಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಲಕ್ಷ ದಾಟಿರಲಿಲ್ಲ. 2020ರ ಸೆಪ್ಟೆಂಬರ್ 17ರಂದು 98,795 ಕೇಸ್ ಕಂಡುಬಂದಿದ್ದೇ ಅತಿಹೆಚ್ಚಾಗಿತ್ತು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *