ಸೇಡಂ: ಕೋವಿಡ್​ನಿಂದ ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳಿಗೆ ಉಚಿತ ಶಿಕ್ಷಣ

ಕೋವಿಡ್​ನಿಂದ ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ತೇಲ್ಕೂರ ಪಾಟೀಲ ಫೌಂಡೇಷನ್ ಮತ್ತು ಮಹಾತ್ಮ ಬಸವೇಶ್ವರ ಶಿಕ್ಷಣ ಸಮಿತಿಯ ಹೆರಿಟೇಜ್ ಪಬ್ಲಿಕ್ ಶಾಲೆ ಮುಂದಾಗಿವೆ.

ಸೇಡಂ: ಕೊರೊನಾ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಇಲ್ಲಿನ ತೇಲ್ಕೂರ ಪಾಟೀಲ ಫೌಂಡೇಷನ್ ಮತ್ತು ಬಸವೇಶ್ವರ ಶಿಕ್ಷಣ ಸಮಿತಿಯ ಹೆರಿಟೇಜ್ ಪಬ್ಲಿಕ್ ಶಾಲೆ ಮುಂದಾಗಿವೆ.

ಕಳೆದ ತಿಂಗಳಿಂದ ಮಹಾಮಾರಿಯ ಆರ್ಭಟಕ್ಕೆ ತತ್ತರಿಸಿದ್ದ ಜನತೆಗೆ ಉಚಿತ ಆಂಬುಲೆನ್ಸ್ ಸೇವೆ ಕಲ್ಪಿಸಲಾಗಿತ್ತು. ಜತೆಗೆ ಪ್ರತಿನಿತ್ಯ ಲಾಕ್​​​ಡೌನ್ ಕಾರ್ಯದಲ್ಲಿ ತೊಡಗಿದ್ದ ಪೊಲೀಸ್ ಸಿಬ್ಬಂದಿ ಮತ್ತು ವೈದ್ಯಕೀಯ ಸಿಬ್ಬಂದಿಗೆ ಪ್ರತಿನಿತ್ಯ ಆಹಾರ, ಹಣ್ಣು, ಡ್ರೈ ಫ್ರೂಟ್ಸ್ ನೀಡುವ ಮೂಲಕ ಸಾಮಾಜಿಕ ಸೇವಾ ಕಾರ್ಯದಲ್ಲಿ ತೊಡಗಿದ್ದ ಇಲ್ಲಿನ ತೇಲ್ಕೂರ ಪಾಟೀಲ ಫೌಂಡೇಷನ್, ಮಹಾತ್ಮ ಬಸವೇಶ್ವರ ಶಿಕ್ಷಣ ಸಮಿತಿಯ ಹೆರಿಟೇಜ್ ಪಬ್ಲಿಕ್ ಶಾಲೆ ಈಗ ಮತ್ತೊಂದು ಮಹತ್ತರ ಹೆಜ್ಜೆಯಿಡಲು ಮುಂದಾಗಿವೆ.

ಕೋವಿಡ್​ನಿಂದ ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವುದಾಗಿ ತೆಲ್ಕೂರ ಫೌಂಡೇಷನ್​​​ ಅಧ್ಯಕ್ಷ ಹಾಗೂ ಕಾರ್ಮಿಕ ಮುಖಂಡ ಅನೀಲಕುಮಾರ ಪಾಟೀಲ ತೇಲ್ಕೂರ ಘೋಷಿಸಿದ್ದಾರೆ.

1ನೇ ತರಗತಿಯಿಂದ 10ನೇ ತರಗತಿಯವರೆಗೆ ಉಚಿತ ವಿದ್ಯಾಭ್ಯಾಸ ನೀಡಲು ಫೌಂಡೇಷನ್ ಮುಂದಾಗಿದೆ. ಇದರ ಸದುಪಯೋಗವನ್ನು ಅನಾಥ ಮಕ್ಕಳು ಪಡೆದುಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಹೆರಿಟೇಜ್ ಶಾಲೆಯ ಆಡಳಿತ ಮಂಡಳಿ ಸಹ ಸರ್ವೆ ಕಾರ್ಯ ಕೈಗೊಂಡಿದ್ದು, ಸೋಂಕಿಗೆ ಬಲಿಯಾದವರ ಮಕ್ಕಳನ್ನು ಗುರುತಿಸುವ ಕೆಲಸ ಮಾಡುತ್ತಿದೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *