ಕಾಲುಬಾಯಿ ರೋಗ ಹತೋಟಿಗೆ ಕ್ರಮ: ಪ್ರಭು ಚವ್ಹಾಣ್

ಬೆಂಗಳೂರು : ರಾಜ್ಯದಲ್ಲಿ ಕಾಲುಬಾಯಿ ರೋಗ ಕಂಡು ಬಂದರೆ ಅದರ ಹತೋಟಿಗೆ ಕ್ರಮ ಕೈಗೊಳ್ಳಬೇಕು ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರೋಗದ ಲಕ್ಷಣ ಕಂಡು ಬಂದರೆ ಲಸಿಕಾ ಸಂಸ್ಥೆಗಳಿಂದ ಲಸಿಕೆ ಖರೀದಿಸಿ ಜಾನುವಾರುಗಳ ಆರೋಗ್ಯ ರಕ್ಷಣೆ ಗೆ ಇಲಾಖೆ ಕಾರ್ಯಪ್ರವೃತ್ತವಾಗಬೇಕು ಎಂದು ಹೇಳಿದ್ದಾರೆ

ಆನೇಕಲ್, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರದಲ್ಲಿ ಕಾಲುಬಾಯಿ ರೋಗಕ್ಕೆ ಲಸಿಕೆ ನೀಡಲಾಗುತ್ತಿದೆ ಈಗಾಗಲೇ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ

ಎಚ್.ಡಿಕೆ ಕಾಳಜಿಗೆ ಅಭಿನಂದನೆ:

ಕಾಲುಬಾಯಿ ರೋಗಕ್ಕೆ ಲಸಿಕಾ ಅಭಿಯಾನ ನಡೆಸುತ್ತಿಲ್ಲ ಎನ್ನುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ಪ್ರತಿಕ್ರಿಯೆ ನೀಡಿರುವ ಅವರು ಗೋವುಗಳ ಬಗ್ಗೆ ಅವರ ಕಾಳಜಿಗೆ ಅಭಿನಂದಿಸುತ್ತೇನೆ ಎಂದಿದ್ದಾರೆ.

ಕಾಲುಬಾಯಿ ರೋಗದ ಗಂಭೀರತೆ ಬಗ್ಗೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು ರೋಗೋದ್ರೇಕ ಕಂಡುಬಂದ ಜಿಲ್ಲೆಗಳಲ್ಲಿ ಖಾಸಗಿ ಸಂಸ್ಥೆಗಳಿಂದ ಲಸಿಕೆ ಖರೀದಿಸಿ ರಾಸುಗಳ ಆರೋಗ್ಯ ಕಾಪಾಡಲಾಗುತ್ತಿದೆ ಎಂದರು.

ರಾಜ್ಯದಲ್ಲಿ ಯಾವುದೇ ರಾಸುಗಳ ಸಾವು ಸಂಭವಿಸಿಲ್ಲ. ರೋಗದ ಲಕ್ಷಣ ಕಂಡುಬಂದ ರಾಸುಗಳಿಗೆ ಚಿಕಿತ್ಸೆ ನೀಡುತ್ತಿದ್ದು ,ಈ ವ್ಯಾಪ್ತಿಯ ಸುತ್ತ ಮುತ್ತಲಿನ ಪ್ರದೇಶದಲ್ಲಿ ಬೇರೆ ರಾಸುಗಳಿಗೂ ತಕ್ಷಣದಲ್ಲಿಯೇ ಅಧಿಕಾರಿಗಳು ಲಸಿಕೆ ನೀಡುತ್ತಿರುವುದರಿಂದ ಕಾಲುಬಾಯಿ ರೋಗ ಹತೋಟಿಯಲ್ಲಿದೆ ಎಂದು ತಿಳಿಸಿದ್ದಾರೆ.

ಲಸಿಕೆ ನೀಡಿದ ಜಿಲ್ಲೆಗಳು:

ಚಿಕ್ಕಬಳ್ಳಾಪುರದಲ್ಲಿ 2100, ಆನೇಕಲ್ 1450 ಹಾಗೂ ರಾಮನಗರದ 70 ಜಾನುವಾರುಗಳಿಗೆ ಲಸಿಕೆ ನೀಡಲಾಗಿದೆ. ರಾಮನಗರದಲ್ಲಿ 5 ರಾಸುಗಳಲ್ಲಿ ರೋಗೋದ್ರೇಕ ಕಾಣಿಸಿಕೊಂಡಿತ್ತು ಅದರಲ್ಲಿ 4 ರಾಸುಗಳು ಆರೋಗ್ಯ ಸ್ಥಿರವಾಗಿದ್ದು ಒಂದು ರಾಸುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಯಾವುದೇ ಜಿಲ್ಲೆಗಳಲ್ಲಿ ಕಾಲುಬಾಯಿ ರೋಗದಿಂದ ರಾಸುಗಳ ಸಾವು ಸಂಭವಿಸಿಲ್ಲ ಎಂದು ಹೇಳಿದ್ದಾರೆ

ಕಳೆದ ನವೆಂಬರ್ – ಡಿಸೆಂಬರ್ ನಲ್ಲಿ ಕಾಲುಬಾಯಿ ಲಸಿಕಾ ಅಭಿಯಾನ ಮಾಡಲಾಗಿರುತ್ತದೆ. 2013 ರಿಂದ ಪ್ರತಿವರ್ಷ ಲಸಿಕೆ ನೀಡುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಪ್ರತಿ ವರ್ಷ ಕೇಂದ್ರ ಸರ್ಕಾರ ಮತ್ತು ರಾಜ್ಯಸರ್ಕಾರ 60:40 ಅನುಪಾತದಲ್ಲಿ ಲಸಿಕಾ ಕಾರ್ಯಕ್ರಮ ನಡೆಯುತ್ತಿತ್ತು. ಕಳೆದ ವರ್ಷದಿಂದ ಕಾಲುಬಾಯಿ ರೋಗದ ಲಸಿಕಾ ಅಭಿಯಾನ ಸಂಪೂರ್ಣವಾಗಿ ಕೇಂದ್ರದ ಯೋಜನೆಯಾಗಿ ನಡೆಯುತ್ತಿದೆ. ಈ ಸಲ ಕೋವಿಡ್ ನಿಂದಾಗಿ ಕೇಂದ್ರದಿಂದ ಲಸಿಕಾ ವೇಳಾಪಟ್ಟಿ ನೀಡುವುದು ವಿಳಂಬವಾಗಿದೆ ಎಂದರು.

ಸದ್ಯ ಕೇಂದ್ರ ಸರ್ಕಾರದೊಂದಿಗೆ ಎಲ್ಲ ಅಗತ್ಯ ಸಂಹವನ ನಡೆಸಲಾಗಿದ್ದು ಜುಲೈ ತಿಂಗಳಿನಲ್ಲಿ ಸಾಮೂಹಿಕ ಲಸಿಕಾ ಅಭಿಯಾನ ನಡೆಯುವ ಮಾಹಿತಿ ಕೇಂದ್ರ ಸರ್ಕಾದದಿಂದ ದೊರೆತಿದೆ. ಸಧ್ಯ ರೋಗೋದ್ರೇಕ ಕಂಡು ಬಂದಲ್ಲಿ ಸ್ಥಳೀಯವಾಗಿ ಅಗತ್ಯತೆಗೆ ಅನುಗುಣವಾಗಿ ಆಯಾ ಜಿಲ್ಲೆಗಳಲ್ಲಿ ಲಸಿಕೆ ಖರೀದಿಗೆ ತಾಂತ್ರಿಕ ಅನುಮೋದನೆ ನೀಡಲಾಗಿದ್ದು ರಾಸುಗಳ ಆರೋಗ್ಯದ ದೃಷ್ಟಿಯಿಂದ ಕ್ಷಿಪ್ರ ಕಾರ್ಯಾಚರಣೆ ನಡೆಸಲು ಈಗಾಗಲೇ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *