ಹಿರಿಯ ಪತ್ರಕರ್ತ, ನಟ ಸುರೇಶ್​ಚಂದ್ರ ನಿಧನ

ಬೆಂಗಳೂರು: ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ ಹಾಗೂ ಚಿತ್ರನಟ ಸುರೇಶ್​ಚಂದ್ರ ಅವರು ಇಂದು ( ಜೂನ್ 11) ಮಧ್ಯಾಹ್ನ ಮೃತ ಪಟ್ಟಿದ್ದಾರೆ. ಇತ್ತೀಚಿಗೆ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಇಂದು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು.

 

80ರ ದಶಕದಿಂದ ಸಿನಿಮಾ ಪತ್ರಿಕೋದ್ಯಮದಲ್ಲಿ ಕೆಲಸ ನಿರ್ವಹಿಸಿದ್ದ ಸುರೇಶ್​ಚಂದ್ರ ಅವರು ಚಂದನವನದ ಶಂಕರ್​ನಾಗ್​, ವಿಷ್ಣುವರ್ಧನ್​, ಅಂಬರೀಶ್​, ದೇವರಾಜ್​ ಸೇರಿದಂತೆ ಹಲವು ಹಿರಿಯ ನಟರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು.

ನಟ, ನಿರ್ದೇಶಕ ಎಸ್​.ನಾರಾಯಣ್​ ಅವರ ಆಹ್ವಾನದ ಮೇರೆಗೆ ‘ಚೆಲುವಿನ ಚಿತ್ತಾರ’ ಸಿನಿಮಾದಲ್ಲಿ ಪೋಷಕ ನಟರಾಗಿ ತೆರೆ ಮೇಲೆ ಕಾಣಿಸಿಕೊಂಡ ಸುರೇಶ್​ಚಂದ್ರ ಅವರು 50ಕ್ಕೂ ಹೆಚ್ಚು ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *