‘ರಾಬರ್ಟ್’ ನಿರ್ಮಾಪಕ ಉಮಾಪತಿ ಶ್ರೀನಿವಾಸ್‌ಗೆ ಕೊಲೆ ಬೆದರಿಕೆ: ಆರೋಪಿ ಬಂಧನ

ಹೈಲೈಟ್ಸ್‌:

  • ‘ರಾಬರ್ಟ್’ ನಿರ್ಮಾಪಕ ಉಮಾಪತಿ ಶ್ರೀನಿವಾಸ್‌ಗೆ ಕೊಲೆ ಬೆದರಿಕೆ
  • ಕೊಲೆ ಬೆದರಿಕೆ ಆರೋಪದ ಮೇಲೆ ರಾಜೇಶ್ ಅಲಿಯಾಸ್ ಕರಿಯ ರಾಜೇಶ್ ಅರೆಸ್ಟ್
  • ನೇಪಾಳದಲ್ಲಿ ತಲೆಮರೆಸಿಕೊಂಡಿದ್ದ ರಾಜೇಶ್
  • ಬಾಂಬೆ ರವಿ ಸಹಚರ ಕರಿಯ ರಾಜೇಶ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್‘ ಚಿತ್ರ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ರಾಜೇಶ್ ಅಲಿಯಾಸ್ ಕರಿಯ ರಾಜೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ರಾಜೇಶ್ ಅಲಿಯಾಸ್ ಕರಿಯ ರಾಜೇಶ್ ಎಂಬಾತ ಬಾಂಬೆ ರವಿ ಸಹಚರನಾಗಿದ್ದು, ನೇಪಾಳದಲ್ಲಿ ತಲೆಮರೆಸಿಕೊಂಡಿದ್ದ. ಇದೀಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಉಮಾಪತಿ ಶ್ರೀನಿವಾಸ್ ಹತ್ಯೆಗೆ ಸಂಚು
ಚಿತ್ರ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಮತ್ತು ಅವರ ಸಹೋದರ ದೀಪಕ್ ಹತ್ಯೆಗೆ ಕಳೆದ ವರ್ಷ ಸಂಚು ರೂಪಿಸಲಾಗಿತ್ತು. ಇಬ್ಬರಿಗೂ ಕೊಲೆ ಬೆದರಿಕೆ ಹಾಕಲಾಗಿತ್ತು. ಈ ಬಗ್ಗೆ ಮಾಹಿತಿ ಪಡೆದಿದ್ದ ಜಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು 11 ಮಂದಿಯನ್ನು ವಶಕ್ಕೆ ಪಡೆದಿದ್ದರು. ಇದೀಗ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೇಶ್ ಅಲಿಯಾಸ್ ಕರಿಯ ರಾಜೇಶ್ ಎಂಬಾತನನ್ನು ದಕ್ಷಿಣ ವಿಭಾಗದ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬೆಂಗಳೂರಿನ ಹೊರಗಿದ್ದುಕೊಂಡು ಉದ್ಯಮಿಗಳಿಗೆ ಕೊಲೆ ಬೆದರಿಕೆ ಹಾಕುವುದು, ಹಣ ವಸೂಲಿ ಮಾಡುವುದು, ದರೋಡೆ ಮಾಡುವುದು ಈ ಗ್ಯಾಂಗ್‌ನ ಕೆಲಸವಾಗಿತ್ತು.

ಅಂದ್ಹಾಗೆ, ದರ್ಶನ್ ನಟನೆಯ ‘ರಾಬರ್ಟ್’, ಸುದೀಪ್ ನಟನೆಯ ‘ಹೆಬ್ಬುಲಿ’, ‘ಒಂದಲ್ಲಾ ಎರಡಲ್ಲಾ’ ಚಿತ್ರಗಳನ್ನು ನಿರ್ಮಾಣ ಮಾಡಿರುವ ಉಮಾಪತಿ ಶ್ರೀನಿವಾಸ್ ಗೌಡ ಸದ್ಯ ‘ಮದಗಜ’ ಚಿತ್ರಕ್ಕೆ ಬಂಡವಾಳ ಹಾಕುತ್ತಿದ್ದಾರೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *