ಸ್ನೇಹಿತನ ಮೇಲಿನ ಹಲ್ಲೆಗೆ ಪ್ರತಿಕಾರ: ಸಿನಿಮಾ ರೀತಿಯಲ್ಲಿ ನಡೆಯಿತು ಕೊಲೆ

ಕಲಬುರಗಿ: ಸ್ನೇಹಿತನ ಮೇಲಿನ ಹಲ್ಲೆಗೆ ಪ್ರತಿಕಾರ ಹಿನ್ನೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಮಾರಕಾಸ್ರ್ರಗಳಿಂದ ಪೊಲೀಸ್ ಪೇದೆ ಪುತ್ರನನ್ನು ಕೊಚ್ಚಿ ಹತ್ಯೆ ಮಾಡಿರುವ ಘಟನೆ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ.

ಪೊಲೀಸ್ ಪೇದೆ ಚಂದ್ರಕಾಂತ ಎಂಬುವರ ಪುತ್ರ ಅಭಿಷೇಕ್ (23) ಎಂಬಾತನನ್ನ ನಡು ರಸ್ತೆಯಲ್ಲಿ ಅಟ್ಟಾಡಿಸಿ ಲಾಂಗು ಮಚ್ಚುಗಳಿಂದ ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿರುವ ದೃಶ್ಯ ಸಿಸಿಟಿವಿಯಲ್ಲೆ ಸೆರೆಯಾಗಿದೆ.

ಅಭಿಷೇಕ್ ಕಳೇದ ನಾಲ್ಕು ದಿನಗಳ ಹಿಂದೆ ಬೆಂಗಳೂರಿನಿಂದ ಕಲಬುರಗಿಗೆ ಬಂದಿದ್ದ ಇಂದು ಬೆಳಗ್ಗೆ ಜಿಮ್ ಹೋಗ್ತಿನಿ ಅಂತ ಮನೆಯಿಂದ ಬಂದಿದ್ದ ಕೇಂದ್ರ ಬಸ್ ನಿಲ್ದಾಣದ ಬಳಿ ಹೊಂಚು ಹಾಕಿ ಕುಳಿತಿದ್ದ ದುಷ್ಕರ್ಮಿಗಳ ಗ್ಯಾಂಗ್ ಆತ ಬರ್ತಿದಂತೆ ಬೈಕ್ ಗೆ ಡಿಕ್ಕಿ ಹೊಡೆದಿದ್ದಾರೆ.

ಕೆಳಗೆ ಬಿದ್ದವನೆ ಅಲ್ಲಿಂದ ಓಡಲು ಶುರು ಮಾಡಿದ್ದಾನೆ. ಮುಖ್ಯ ರಸ್ತೆಯಿಂದ ಓಡಿ ಬಂದು ಕೇಂದ್ರ ಬಸ್ ನಿಲ್ದಾಣದ ಒಳಗೆ ನುಗ್ಗಿದರು ಬಿಡದ ದುಷ್ಕರ್ಮಿ ನಾಲ್ಕೈದು ಜನರ ಗ್ಯಾಂಗ್ ಆತನನ್ನ ಮನಬಂದಂತೆ ಮಚ್ಚು ಲಾಂಗ್ ನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಬಸ್ ನಿಲ್ದಾಣದಲ್ಲಿ ಅಟ್ಟಾಡಿಸಿಕೊಂಡು ಓಡಿ ಬರುವ ದೃಶ್ಯ ಸದ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇನ್ನೂ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾವಿರಾರು ಜನರ ಮಧ್ಯೆ ನಡೆದ ಭೀಕರ ಹತ್ಯೆಯಿಂದ ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ.

ಸ್ಥಳಕ್ಕೆ ಡಿಸಿಪಿ ಅಡ್ಡೂರು ಶ್ರೀನಿವಾಸಲು ಹಾಗೂ ಅಶೋಕ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *