ಕಲಬುರಗಿ: ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಕಾನ್ಸ್ಟೇಬಲ್ ಶವ ಪತ್ತೆ!
ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರ ಮೃತದೇಹ ಪತ್ತೆಯಾಗಿದೆ. ಕಲಬುರಗಿ ತಾಲೂಕಿನ ಸಾವಳಗಿ ಬಳಿ ಈ ಘಟನೆ ನಡೆದಿದೆ.
ಕಲಬುರಗಿ: ಮದುವೆಗೆ 4 ದಿನ ಬಾಕಿ ಇರುವಾಗಲೇ ಪೊಲೀಸ್ ಕಾನ್ಸ್ಟೇಬಲ್ ಓರ್ವರು ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿರುವ ಘಟನೆ ಕಲಬುರಗಿ ತಾಲೂಕಿನ ಸಾವಳಗಿ ಬಳಿ ನಡೆದಿದೆ.
ಶ್ರೀನಾಥ್ (25) ಮೃತ ಕಾನ್ಸ್ಟೇಬಲ್. ಇದೇ ಡಿಸೆಂಬರ್ 1ರಂದು ಇವರ ವಿವಾಹ ನಿಶ್ಚಯವಾಗಿತ್ತು. ಅಫಜಲಪುರ ತಾಲೂಕಿನ ಮದರಾ ಕೆ ಗ್ರಾಮದ ನಿವಾಸಿಯಾಗಿದ್ದ ಶ್ರೀನಾಥ್ ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇಂದು ಬೆಳ್ಳಗೆ ರೈಲು ಹಳಿ ಮೇಲೆ ಅವರ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಅಥವಾ ಕೊಲೆಯೇ? ಎಂಬ ನಿಖರ ಮಾಹಿತಿ ತಿಳಿದು ಬಂದಿಲ್ಲ.
ಮದುವೆಗೆ ನಾಲ್ಕು ದಿನ ಬಾಕಿ ಇರುವಾಗಲೇ ಶ್ರೀನಾಥ್ ಶವವಾಗಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಬಗ್ಗೆ ತನಿಖೆ ಆರಂಭಗೊಂಡಿದ್ದು, ತನಿಖೆ ನಂತರವಷ್ಟೇ ಕೊಲೆ ಅಥವಾ ಆತ್ಮಹತ್ಯೆಯೇ? ಎಂಬುವುದು ತಿಳಿದು ಬರಬೇಕಿದೆ. ಈ ಸಂಬಂಧ ವಾಡಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.