ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಯುವಕನ ಬರ್ಬರ ಕೊಲೆ

ಚಿತ್ತಾಪುರ ಪಟ್ಟಣದ ಆಶ್ರಯ ಕಾಲೋನಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಯುವಕನನ್ನು ಬರ್ಬರವಾಗಿ ಹತ್ಯೆಗೈಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪುಡಿರೌಡಿ ಲಂಗ್ಡಾ ಸಲೀಂನನ್ನು ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಬರ್ಬರವಾಗಿ ಯುವಕನ ಹತ್ಯೆಗೈದ ಘಟನೆ ಚಿತ್ತಾಪುರ ಪಟ್ಟಣದ ಆಶ್ರಯ ಕಾಲೋನಿಯಲ್ಲಿ ನಡೆದಿದೆ. ಮಹಮ್ಮದ್ ರಶೀದ್ (26) ಕೊಲೆಯಾದ ಯುವಕ. ಪುಡಿರೌಡಿ ಲಂಗ್ಡಾ ಸಲೀಂ ಕೊಲೆಗೈದ ಆರೋಪಿ.

ಪೊಲೀಸರು ಲಂಗ್ಡಾ ಸಲೀಂನನ್ನು ಬಂಧಿಸಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ರಶೀದ್ ಹಾಗೂ ಸಲೀಂ ಮಧ್ಯೆ ಜಗಳ ನಡೆದಿದ್ದು, ಗಲಾಟೆ ವಿಕೋಪಕ್ಕೆ ತಿರುಗಿದಾಗ ಸಲೀಂ, ರಶೀದ್‌ಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

 

ಲಂಗ್ಡಾ ಸಲೀಂ ಗಾಂಜಾ ಮಾರಾಟ ಮಾಡುತ್ತಿದ್ದ. ಸಲೀಂ ಬಳಿ ರಶೀದ್ ಗಾಂಜಾ ಖರೀದಿಗೆ ಹೋದಾಗ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಇನ್ನೊಂದೆಡೆ, ಹುಡುಗಿಯ ವಿಚಾರವಾಗಿ ಸಹ ಇಬ್ಬರ ನಡುವೆ ಗಲಾಟೆ ಸಂಭವಿಸಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಈ ಕುರಿತು ಚಿತ್ತಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *