ಬಡ, ಮಧ್ಯಮ ವರ್ಗದವರ ಆರ್ಥಿಕ ಪರಿಸ್ಥಿತಿ ಜರ್ಜರಿತ: ಲಾಕ್‌ಡೌನ್ ಕೊನೆಯ ಆಯ್ಕೆಯಾಗಿರಲಿ – ಕವಿರಾಜ್

ಹೈಲೈಟ್ಸ್‌:

  • ಮತ್ತೆ ಹೆಚ್ಚಾಗುತ್ತಿರುವ ಕೋವಿಡ್ ಪ್ರಕರಣಗಳ ಸಂಖ್ಯೆ
  • ಒಮಿಕ್ರಾನ್ ಪ್ರಕರಣಗಳು ಕೂಡ ಅಧಿಕವಾಗುತ್ತಿವೆ
  • ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಹೇರಿದ ರಾಜ್ಯ ಸರ್ಕಾರ
  • ಲಾಕ್‌ಡೌನ್ ಕೊನೆಯ ಆಯ್ಕೆಯಾಗಿರಲಿ ಎಂದ ಕವಿರಾಜ್

ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗುತ್ತಿವೆ. ಒಮಿಕ್ರಾನ್ ಪ್ರಕರಣಗಳು ಕೂಡ ಅಧಿಕವಾಗತೊಡಗಿವೆ. ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುವುದನ್ನು ತಪ್ಪಿಸಲು ಕರ್ನಾಟಕ ರಾಜ್ಯ ಸರ್ಕಾರ ಈಗಾಗಲೇ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ಹಲವು ಚಟುವಟಿಕೆಗಳಿಗೆ ನಿರ್ಬಂಧವನ್ನೂ ಹೇರಿದೆ. ಕೋವಿಡ್ ಪ್ರಕರಣಗಳು ಇನ್ನಷ್ಟು ಹೆಚ್ಚಳವಾದರೆ ಲಾಕ್‌ ಡೌನ್ ಹೇರುವ ಸಾಧ್ಯತೆಯೂ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ. ಹೀಗಿರುವಾಗಲೇ, ಕನ್ನಡ ನಿರ್ದೇಶಕ, ಚಿತ್ರ ಸಾಹಿತಿ ಕವಿರಾಜ್ ‘’ಲಾಕ್‌ ಡೌನ್ ಕೊನೆಯ ಆಯ್ಕೆಯಾಗಿರಲಿ’’ ಎಂದು ಅಭಿಪ್ರಾಯ ಪಟ್ಟಿದ್ದಾರೆ.

‘’ಲಾಕ್ ಡೌನ್ ಹೊಡೆತಕ್ಕೆ ಸಿಲುಕಿ ಬಡ ಮತ್ತು ಮಧ್ಯಮ ವರ್ಗದ ಆರ್ಥಿಕ ಪರಿಸ್ಥಿತಿ ಜರ್ಜರಿತವಾಗಿದೆ. ಹೇಗೋ ಒದ್ದಾಡಿ ಚಿಗುರುತ್ತಿರುವ ಹೊತ್ತಿಗೆ ಮತ್ತೆ ಲಾಕ್ ಡೌನ್ ಹೇರಿದರೆ ಅವರ ಬದುಕು ಇನ್ನಷ್ಟು ದುಸ್ತರವಾಗಲಿದೆ’’ ಎಂದು ಫೇಸ್‌ಬುಕ್‌ನಲ್ಲಿ ನಿರ್ದೇಶಕ ಕವಿರಾಜ್ ಬರೆದುಕೊಂಡಿದ್ದಾರೆ.

ನಿರ್ದೇಶಕ ಕವಿರಾಜ್ ಅವರ ಫೇಸ್‌ಬುಕ್ ಪೋಸ್ಟ್
‘’ಒಮಿಕ್ರಾನ್ ವೇಗವಾಗಿ ಹರಡುವುದಾದರು ಅದು ಪ್ರಾಣಾಪಾಯ ತರುವುದಿಲ್ಲ ಎಂದು ಸ್ವತಃ WHO ಹೇಳಿದೆ. ಅದೇ ಪ್ರಕಾರ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರೂ ಆಸ್ಪತ್ರೆ ಸೇರುತ್ತಿರುವವರ ಅನುಪಾತ ಬಹಳ ಕಡಿಮೆಯೇ ಇದೆ‌.

ಸಾಮರ್ಥ್ಯದ ಮಾಪನದಲ್ಲಿ ಒಮಿಕ್ರಾನ್ ಈಗಾಗಲೇ ಶಕ್ತಿಗುಂದಿರುವ ಕೊರೊನಾ ವೈರಾಣು. ಒಮಿಕ್ರಾನ್ ಒಂದು ಸಾಮಾನ್ಯ ಶೀತ, ಕೆಮ್ಮಿನಂತೆ ಕಾಡುವುದು. ಅದು ಒಮ್ಮೆ ಎಲ್ಲರಿಗೂ ಬಂದು ಹೋದರೆ ಒಂದು ಲೆಕ್ಕಾಚಾರದಲ್ಲಿ ಒಳ್ಳೆಯದ್ದೆ. ಅದರಿಂದ ಹರ್ಡ್ ಇಮ್ಯೂನಿಟಿ ಬೆಳೆಯುತ್ತದೆ. ಆ ಮೂಲಕ ಪ್ಯಾಂಡೆಮಿಕ್ ಎಂಡೆಮಿಕ್ ಹಂತ ತಲುಪಲಿದೆ ಎಂದು WHO ಮುಖ್ಯ ವಿಜ್ಞಾನಿ ಸೌಮ್ಯ ಸ್ವಾಮಿನಾಥನ್ ಸೇರಿದಂತೆ ಹಲವು ತಜ್ಞ ವೈದ್ಯರು ಹೇಳುತ್ತಿದ್ದಾರೆ. ಆದರೂ ಸರ್ಕಾರಗಳು ಈ ಬೆದರು ಬೊಂಬೆಯಂತ ಲಾಕ್ ಡೌನ್ ಬಗ್ಗೆ ಯಾಕೆ ಚಿಂತಿಸುತ್ತಿವೆಯೋ ??

 

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *